24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ಸಾವಯವ ಕೃಷಿ ಯೋಜನೆ, ಮಂಗಳ ಕಿಸಾನ್ ಸಮೃದ್ಧಿ ವಿಭಾಗ ಬಿ.ಸಿ ರೋಡ್ ಬಂಟ್ವಾಳ ಇವರು ಕೊಡ ಮಾಡುವ ಅತ್ಯುತ್ತಮ ಸಾವಯವ ಕೃಷಿ ರೈತ ಪ್ರಶಸ್ತಿ ಪ್ರೋತ್ಸಾಹಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಪ್ರಗತಿಪರ ಕೃಷಿಕರಾದ ನಡ ಗ್ರಾಮದ ಕೃಷ್ಣಪ್ಪ ಪೂಜಾರಿ, ಬಳಂಜ ಗ್ರಾಮದ ರಮಾನಾಥ ಶೆಟ್ಟಿ,ನಾವರ ಗ್ರಾಮದ ನವೀನ್ ಪೂಜಾರಿ, ಕಣಿಯೂರು ಗ್ರಾಮದ ಅಜಿತ್ ಜೈನ್ ಹಾಗೂ ಇಳಂತಿಲ ಗ್ರಾಮದ ತಿಮ್ಮಪ್ಪ ಗೌಡ ಅವರು ಆಯ್ಕೆಗೊಂಡು ಆ. 10 ರಂದು ಬಿ.ಸಿ ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಮಾನಾಥ ರೈಯವರಿಂದ ಪ್ರಶಸ್ತಿ ಪಡೆದು ಸನ್ಮಾನ ಸ್ವೀಕರಿಸಿದರು.


ಇವರು ಮಂಗಳ ಮತ್ತು ಸನ್ಮಾನ ‘ಕಿಸಾನ್ ಸಮೃದ್ಧಿ ಸಾವಯವ ಗೊಬ್ಬರವನ್ನು ತಮ್ಮ ಅಡಿಕೆ, ತೆಂಗು, ಕಾಳು ಮೆಣಸು, ಮತ್ತು ತರಕಾರಿ ಬೆಳೆಗಳಿಗೆ ಕಳೆದ 9 ವರ್ಷಗಳಿಂದ ಸತತವಾಗಿ ಬಳಕೆ ಮಾಡುವ ಮೂಲಕ ಉತ್ತಮ ಇಳುವರಿ ಪಡೆದ ಸಂತೃಪ್ತ ಬಳಕೆದಾರರಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕ ಮೋಹನ್ ಗೌಡ, ಅಶ್ವಿನಿ ಮೋಹನ್ ಗೌಡ, ಹಿರಿಯ ಅಧಿಕಾರಿ ಭಾರತಿ ರೈ,ದ.ಕ ಜಿಲ್ಲಾ, ಉಡುಪಿ, ಕಾಸರಗೋಡು, ಬೆಳ್ತಂಗಡಿ ಭಾಗಗಳಿಂದ, ಉದ್ಯೋಗಿಗಳು, ಬಳಕೆದಾರರು ಉಪಸ್ಥಿತರಿದ್ದರು.

Related posts

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

Suddi Udaya

ಮಡಂತ್ಯಾರು ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಜೈನ ಮುನಿ ಆಚಾರ್ಯ ಶ್ರೀ ಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ : ಶಾಸಕ ಹರೀಶ್ ಪೂಂಜ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ “ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

Suddi Udaya
error: Content is protected !!