September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ಸಾವಯವ ಕೃಷಿ ಯೋಜನೆ, ಮಂಗಳ ಕಿಸಾನ್ ಸಮೃದ್ಧಿ ವಿಭಾಗ ಬಿ.ಸಿ ರೋಡ್ ಬಂಟ್ವಾಳ ಇವರು ಕೊಡ ಮಾಡುವ ಅತ್ಯುತ್ತಮ ಸಾವಯವ ಕೃಷಿ ರೈತ ಪ್ರಶಸ್ತಿ ಪ್ರೋತ್ಸಾಹಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಪ್ರಗತಿಪರ ಕೃಷಿಕರಾದ ನಡ ಗ್ರಾಮದ ಕೃಷ್ಣಪ್ಪ ಪೂಜಾರಿ, ಬಳಂಜ ಗ್ರಾಮದ ರಮಾನಾಥ ಶೆಟ್ಟಿ,ನಾವರ ಗ್ರಾಮದ ನವೀನ್ ಪೂಜಾರಿ, ಕಣಿಯೂರು ಗ್ರಾಮದ ಅಜಿತ್ ಜೈನ್ ಹಾಗೂ ಇಳಂತಿಲ ಗ್ರಾಮದ ತಿಮ್ಮಪ್ಪ ಗೌಡ ಅವರು ಆಯ್ಕೆಗೊಂಡು ಆ. 10 ರಂದು ಬಿ.ಸಿ ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಮಾನಾಥ ರೈಯವರಿಂದ ಪ್ರಶಸ್ತಿ ಪಡೆದು ಸನ್ಮಾನ ಸ್ವೀಕರಿಸಿದರು.


ಇವರು ಮಂಗಳ ಮತ್ತು ಸನ್ಮಾನ ‘ಕಿಸಾನ್ ಸಮೃದ್ಧಿ ಸಾವಯವ ಗೊಬ್ಬರವನ್ನು ತಮ್ಮ ಅಡಿಕೆ, ತೆಂಗು, ಕಾಳು ಮೆಣಸು, ಮತ್ತು ತರಕಾರಿ ಬೆಳೆಗಳಿಗೆ ಕಳೆದ 9 ವರ್ಷಗಳಿಂದ ಸತತವಾಗಿ ಬಳಕೆ ಮಾಡುವ ಮೂಲಕ ಉತ್ತಮ ಇಳುವರಿ ಪಡೆದ ಸಂತೃಪ್ತ ಬಳಕೆದಾರರಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕ ಮೋಹನ್ ಗೌಡ, ಅಶ್ವಿನಿ ಮೋಹನ್ ಗೌಡ, ಹಿರಿಯ ಅಧಿಕಾರಿ ಭಾರತಿ ರೈ,ದ.ಕ ಜಿಲ್ಲಾ, ಉಡುಪಿ, ಕಾಸರಗೋಡು, ಬೆಳ್ತಂಗಡಿ ಭಾಗಗಳಿಂದ, ಉದ್ಯೋಗಿಗಳು, ಬಳಕೆದಾರರು ಉಪಸ್ಥಿತರಿದ್ದರು.

Related posts

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಪ್ರಕರಣ: ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗೇಶ್ ಕುಲಾಲ್ ರಿಗೆ ಗೌರವಾರ್ಪಣೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ವಲಯದ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ

Suddi Udaya
error: Content is protected !!