25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ಸಾವಯವ ಕೃಷಿ ಯೋಜನೆ, ಮಂಗಳ ಕಿಸಾನ್ ಸಮೃದ್ಧಿ ವಿಭಾಗ ಬಿ.ಸಿ ರೋಡ್ ಬಂಟ್ವಾಳ ಇವರು ಕೊಡ ಮಾಡುವ ಅತ್ಯುತ್ತಮ ಸಾವಯವ ಕೃಷಿ ರೈತ ಪ್ರಶಸ್ತಿ ಪ್ರೋತ್ಸಾಹಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಪ್ರಗತಿಪರ ಕೃಷಿಕರಾದ ನಡ ಗ್ರಾಮದ ಕೃಷ್ಣಪ್ಪ ಪೂಜಾರಿ, ಬಳಂಜ ಗ್ರಾಮದ ರಮಾನಾಥ ಶೆಟ್ಟಿ,ನಾವರ ಗ್ರಾಮದ ನವೀನ್ ಪೂಜಾರಿ, ಕಣಿಯೂರು ಗ್ರಾಮದ ಅಜಿತ್ ಜೈನ್ ಹಾಗೂ ಇಳಂತಿಲ ಗ್ರಾಮದ ತಿಮ್ಮಪ್ಪ ಗೌಡ ಅವರು ಆಯ್ಕೆಗೊಂಡು ಆ. 10 ರಂದು ಬಿ.ಸಿ ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಮಾನಾಥ ರೈಯವರಿಂದ ಪ್ರಶಸ್ತಿ ಪಡೆದು ಸನ್ಮಾನ ಸ್ವೀಕರಿಸಿದರು.


ಇವರು ಮಂಗಳ ಮತ್ತು ಸನ್ಮಾನ ‘ಕಿಸಾನ್ ಸಮೃದ್ಧಿ ಸಾವಯವ ಗೊಬ್ಬರವನ್ನು ತಮ್ಮ ಅಡಿಕೆ, ತೆಂಗು, ಕಾಳು ಮೆಣಸು, ಮತ್ತು ತರಕಾರಿ ಬೆಳೆಗಳಿಗೆ ಕಳೆದ 9 ವರ್ಷಗಳಿಂದ ಸತತವಾಗಿ ಬಳಕೆ ಮಾಡುವ ಮೂಲಕ ಉತ್ತಮ ಇಳುವರಿ ಪಡೆದ ಸಂತೃಪ್ತ ಬಳಕೆದಾರರಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕ ಮೋಹನ್ ಗೌಡ, ಅಶ್ವಿನಿ ಮೋಹನ್ ಗೌಡ, ಹಿರಿಯ ಅಧಿಕಾರಿ ಭಾರತಿ ರೈ,ದ.ಕ ಜಿಲ್ಲಾ, ಉಡುಪಿ, ಕಾಸರಗೋಡು, ಬೆಳ್ತಂಗಡಿ ಭಾಗಗಳಿಂದ, ಉದ್ಯೋಗಿಗಳು, ಬಳಕೆದಾರರು ಉಪಸ್ಥಿತರಿದ್ದರು.

Related posts

ಉಜಿರೆ: ಅನುಗ್ರಹ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಚಿದಾನಂದ ಪೂಜಾರಿ ಆಯ್ಕೆ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya
error: Content is protected !!