26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ರಾಷ್ಟ್ರಕ್ಕಾಗಿ ಬಲಿದಾನ ನೀಡಿದ ಮಹಾನ್ ವ್ಯಕ್ತಿಗಳ ವ್ಯಕ್ತಿತ್ವ ಹಾಗೂ ರಾಷ್ಟ್ರ ಪ್ರೇಮ ಇಂದಿನ ವಿದ್ಯಾರ್ಥಿಗಳಿಗೆ ಸ್ಪೂರ್ತಿ ನೀಡುವಂತಿದ್ದು, ದೇಶದ ರಕ್ಷಣೆ ಮತ್ತು ಅಭಿವೃದ್ಧಿಯಲ್ಲಿ ಯುವ ಜನಾಂಗ ನಿಷ್ಠೆಯಿಂದ ಪಾಲ್ಗೊಳ್ಳಬೇಕಾಗಿದೆ ಎಂದು ರಾಷ್ಟ್ರೀಯ ಚಿಂತಕ ಲೇಖಕರಾದ ಶಿವಪ್ರಸಾದ್ ಸುರ್ಯ ಹೇಳಿದರು.

ಅವರು ವಾಣಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಭಾರತದ ಇತಿಹಾಸ ಸೋಲಿನ ಇತಿಹಾಸವಲ್ಲ: ಅದು ಸಂಘರ್ಷದ ಇತಿಹಾಸ. ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಿದ್ಯಾರ್ಥಿ ಶಕ್ತಿಯ ತ್ಯಾಗ ಅಪರಿಮಿತವಾಗಿದೆ. ಇದರಲ್ಲಿ ಮಹಿಳಾ ಶಕ್ತಿಯೂ ಸೇರಿಕೊಂಡಿದೆ.
ಇಂದು ಅಂತ:ಶಕ್ತಿಯಿಂದ ಬೆಳೆಯುತ್ತಿರುವ ಭಾರತ ವಿದೇಶಗಳಿಗೆ ಸಡ್ಡು ಹೊಡೆದು ನಿಂತಿದೆ. ಪ್ರಸ್ತುತ ಕಾಲದಲ್ಲಿ ವಿದ್ಯಾರ್ಥಿಗಳು, ವಿಜ್ಞಾನಿಗಳು, ಚಿಂತಕರು ಭಾರತದ ಇತಿಹಾಸವನ್ನು ಚಂದ್ರಗ್ರಹದವರೆಗೂ ತಲುಪಿಸಿಬಿಟ್ಟಿದ್ದಾರೆ. ವಿದೇಶದ ತಂತ್ರಜ್ಞಾನಗಳನ್ನು ಅವಲಂಬಿಸುವುದನ್ನು ಬಿಟ್ಟು ಅದನ್ನು ನಮ್ಮಲ್ಲೇ ಅಭಿವೃದ್ಧಿಪಡಿಸಿದಾಗ ರಾಷ್ಟ್ರಾಭಿವೃದ್ದಿ ಸಾಧ್ಯವಾಗುತ್ತದೆ. ಯುವಶಕ್ತಿಯು ಮೇಧಾ ಶಕ್ತಿಯಿಂದ ಭಾರತದ ಆಕಾಶಕ್ಕೆ ಕವಿದ ಮೋಡವನ್ನು ಸರಿಸಿ ಶುಭ್ರತೆಯನ್ನು ತರುವ ಸಂಕಲ್ಪವನ್ನು ಹೊಂದಬೇಕು ಎಂದರು.


ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಸ್ವಾಗತಿಸಿದರು. ಉಪನ್ಯಾಸಕ ಹರ್ಷಿತ್ ಧನ್ಯವಾದವಿತ್ತರು. ಉಪನ್ಯಾಸಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ

Suddi Udaya

ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ

Suddi Udaya

ಶಿಬರಾಜೆ ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಇಂದಬೆಟ್ಟು: ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ಯವರನ್ನು ಭೇಟಿಯಾದ ಎಸ್.ಡಿ.ಪಿ.ಐ ನಾಯಕರು

Suddi Udaya

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya
error: Content is protected !!