23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ವೇಣೂರು: ಇಲ್ಲಿನ ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣಾ ಕಾರ್ಯಕ್ರಮವು ನಡೆಯಿತು.

ಭರತ್ ಯು. ಜಿ ಅರಣ್ಯಾಧಿಕಾರಿ ವೇಣೂರು ಹಾಗೂ ಶಾಲಾ ಸಂಸ್ಥಾಪಕ ಗಿರೀಶ್ ಕೆ ಹೆಚ್, ಕುಂಭಶ್ರೀ ವೈಭವ ಸಮಿತಿಯ ಅಧ್ಯಕ್ಷ ಹರೀಶ್ ಪೊಕ್ಕಿ, ಕಾಲೇಜಿನ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷಗೋಪಾಲ ಶೆಟ್ಟಿ, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಚಂದ್ರಶೇಖರ ಇವರು ಧ್ವಜಾರೋಹಣ ನೆರವೇರಿಸಿದರು.

ಮುಖ್ಯ ಅತಿಥಿಯಾದ ತಿಮ್ಮಪ್ಪ ಮೂಲ್ಯ ಮಾಜಿ ಸೈನಿಕರು ಮಂಗಳೂರು ಇವರು ಈ ಶಾಲೆಯು ಸಂಸ್ಕಾರಕ್ಕೆ ಮಾದರಿಯಾಗಿದೆ, ಇನ್ನು ಮುಂದಕ್ಕೂ ಇದೇ ರೀತಿ ಮುಂದುವರಿಯಲಿ ಎಂದು ಹೇಳಿದರು.ಅದೇ ರೀತಿ ವೇಣೂರಿನ ಅರಣ್ಯಾಧಿಕಾರಿ ಭರತ್ ಯುಜಿ ಇವರು ಒಳ್ಳೆಯ ವಿದ್ಯಾಭ್ಯಾಸವನ್ನು ಪಡೆದು ಉತ್ತಮ ಪ್ರಜೆಗಳಾಗಿ ಬಾಳಿ ಎಂದು ಮಕ್ಕಳಿಗೆ ಕಿವಿಮಾತು ನೀಡಿದರು.

ಹರೀಶ್ ಪೊಕ್ಕಿ ಇವರು ಈ ವಿದ್ಯಾ ಸಂಸ್ಥೆಯು ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯ ಉತ್ತಮವಾಗಲಿ ಎಂದು ಶುಭ ಹಾರೈಸಿದರು. ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಗೋಪಾಲ ಶೆಟ್ಟಿ ಇವರು ಮನುಷ್ಯನ ಜೀವನದಲ್ಲಿ ಶಿಸ್ತು ಅತ್ಯಗತ್ಯ .ಈ ಶಾಲೆಯು ಶಿಸ್ತಿಗೆ ಎತ್ತಿದ ಕೈ ಎಂದರು .

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಸದಸ್ಯ ವಸಂತ್ ಪಡೀಲ್ , ಪೋಷಕರು , ಕಾಲೇಜಿನ ಪ್ರಾಂಶುಪಾಲರಾದ ಓಮನ ಎಂ ಎ , ಎಲ್ಲಾ ಮುಖ್ಯೋಪಾಧ್ಯಾಯನಿಯರು , ಶಿಕ್ಷಕ ವೃಂದದವರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕ ಅಭಿಲಾಷ್ ಮತ್ತು ಪ್ರೌಢಶಾಲಾ ವಿಭಾಗದ ವಿಭಾಗದ ಶಿಕ್ಷಕಿ ಶ್ರೀಮತಿ ಅಕ್ಷತಾ ನಿರೂಪಿಸಿ , ರಷ್ಯಾದಲ್ಲಿ ಎಂ ಬಿ ಬಿ ಎಸ್ ವ್ಯಾಸಾಂಗ ಮಾಡುತ್ತಿರುವ, ನಮ್ಮ ಶಾಲಾ ಹಿರಿಯ ವಿದ್ಯಾರ್ಥಿಯಾದ ಪೂಜಿತ್ ಕುಲಾಲ್ ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಮಮತಾ ಶಾಂತಿ ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya

ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆಗೆ ಒತ್ತಾಯಿಸಿ ಆ.27: ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳಿಂದ ಬೆಳ್ತಂಗಡಿಯ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya

ಮಾ.9 : ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya
error: Content is protected !!