23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 79 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಬೆಳ್ತಂಗಡಿ ಕ್ಲಬ್ ನ ಅಧ್ಯಕ್ಷ ಲ| ಮುರಳಿ ಬಲಿಪ ವಕೀಲರು ನೆರವೇರಿಸಿದರು.

ರಂಗನಾಥ ರಾವ್ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ದಯಾನಂದ ರೈ, ಪದಾಧಿಕಾರಿಗಳಾದ ದಾಮೋದರ ಬಂಗೇರ, ಗೋಪಾಲ ಗೌಡ, ಕೃಷ್ಣಪ್ಪ ಗೌಡ, ವಿವೇಕ್ ಶೆಟ್ಟಿ ,ಸುಬ್ರಹ್ಮಣ್ಯ ಭಟ್, ಗಣೇಶ್ ಭಂಡಾರಿ, ಕೇಶವ ನಾಯ್ಕ ,ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯರಾದ ಪ್ರಭಾಕರ ಆಚಾರ್ಯ, ಶ್ರೀಮತಿ ಪ್ರೇಮಾ, ರವಿಂದ್ರ ಶೆಟ್ಟಿ, ವಿದ್ಯಾರ್ಥಿ ನಾಯಕ ಧನ್ ರಾಜ್ ಹೆಗ್ಡೆ ಉಪಸ್ಥಿತರಿದ್ದರು.


ವೇದಿಕೆಯ ಮುಂಭಾಗದಲ್ಲಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಅನೇಕ ಪೋಷಕರು, ವಿದ್ಯಾಭಿಮಾನಿಗಳು ಶಾಲೆಯ ಎಲ್ಲಾ ಗುರುಗಳು ,ಗುರು ಮಾತೆಯರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.
ಶಿಕ್ಷಕ ಮಂಜುನಾಥ ಜಿ ಸ್ವಾಗತಿಸಿದರು, ಶ್ರೀಮತಿ ಮಮತಾ ,ಕುಮಾರಿ ಸುಷ್ಮಾ, ಮಕ್ಕಳ ಬಹುಮಾನ ಪಟ್ಟಿ ವಾಚಿಸಿದರು. ಶ್ರೀಮತಿ ಸೌಮ್ಯ ಧನ್ಯವಾದ ಸಮರ್ಪಿಸಿದರು. ಕು. ಶುಭ ಕಾರ್ಯಕ್ರಮ ನಿರೂಪಿಸಿದರು. ಕು. ವೈಶಾಲಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಕೊಕ್ಕಡ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಿವರಾಮ ಗೌಡ ಟಿ. ಎಂ. ನಿಧನ

Suddi Udaya

ಎಸ್.ಡಿ.ಎಂ ಕಾಲೇಜಿನ ಮಾಲಿನಿ ಅಂಚನ್ ಅವರಿಗೆ ಪಿ.ಎಚ್.ಡಿ ಪದವಿ

Suddi Udaya

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

Suddi Udaya

ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ನಿಂದ ಅತ್ಯುತ್ತಮ ಗ್ರಾಮ ಪಂಚಾಯತ್ ಆಗಿ ಆಯ್ಕೆಯಾದ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ

Suddi Udaya

ನಿಡಿಗಲ್ ನಲ್ಲಿ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

Suddi Udaya
error: Content is protected !!