September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 79 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಬೆಳ್ತಂಗಡಿ ಕ್ಲಬ್ ನ ಅಧ್ಯಕ್ಷ ಲ| ಮುರಳಿ ಬಲಿಪ ವಕೀಲರು ನೆರವೇರಿಸಿದರು.

ರಂಗನಾಥ ರಾವ್ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ದಯಾನಂದ ರೈ, ಪದಾಧಿಕಾರಿಗಳಾದ ದಾಮೋದರ ಬಂಗೇರ, ಗೋಪಾಲ ಗೌಡ, ಕೃಷ್ಣಪ್ಪ ಗೌಡ, ವಿವೇಕ್ ಶೆಟ್ಟಿ ,ಸುಬ್ರಹ್ಮಣ್ಯ ಭಟ್, ಗಣೇಶ್ ಭಂಡಾರಿ, ಕೇಶವ ನಾಯ್ಕ ,ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯರಾದ ಪ್ರಭಾಕರ ಆಚಾರ್ಯ, ಶ್ರೀಮತಿ ಪ್ರೇಮಾ, ರವಿಂದ್ರ ಶೆಟ್ಟಿ, ವಿದ್ಯಾರ್ಥಿ ನಾಯಕ ಧನ್ ರಾಜ್ ಹೆಗ್ಡೆ ಉಪಸ್ಥಿತರಿದ್ದರು.


ವೇದಿಕೆಯ ಮುಂಭಾಗದಲ್ಲಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಅನೇಕ ಪೋಷಕರು, ವಿದ್ಯಾಭಿಮಾನಿಗಳು ಶಾಲೆಯ ಎಲ್ಲಾ ಗುರುಗಳು ,ಗುರು ಮಾತೆಯರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.
ಶಿಕ್ಷಕ ಮಂಜುನಾಥ ಜಿ ಸ್ವಾಗತಿಸಿದರು, ಶ್ರೀಮತಿ ಮಮತಾ ,ಕುಮಾರಿ ಸುಷ್ಮಾ, ಮಕ್ಕಳ ಬಹುಮಾನ ಪಟ್ಟಿ ವಾಚಿಸಿದರು. ಶ್ರೀಮತಿ ಸೌಮ್ಯ ಧನ್ಯವಾದ ಸಮರ್ಪಿಸಿದರು. ಕು. ಶುಭ ಕಾರ್ಯಕ್ರಮ ನಿರೂಪಿಸಿದರು. ಕು. ವೈಶಾಲಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಸದಸ್ಯೆಯ ತಂಡದಿಂದ ಹಲ್ಲೆ: ಎಸ್‌ಡಿಪಿಐ ತೆಕ್ಕಾರು ಗ್ರಾಮ ಸಮಿತಿ ಖಂಡನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಣಿ-ವಿಕಸಿತ ಭಾರತ ಸಂಕಲ್ಪ ಸಭೆ

Suddi Udaya

ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ : ಕೃಷಿ ಹಾನಿ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ವಸತಿ ಶಾಲೆ ಮತ್ತು ಕಾಲೇಜಿನ ಸಂಸ್ಥಾಪಕ ಗಿರೀಶ್ ಕೆ ಹೆಚ್ ರವರು ಶಿಕ್ಷಣ ಸಿಂಧೂರ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!