September 6, 2026
ಶಾಲಾ ಕಾಲೇಜು

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್-ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಮತ್ತು ಸಾಂಸ್ಕೃತಿಕ ವೇದಿಕೆ ಇವುಗಳ ಸಹಯೋಗದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ರೊನಾಲ್ಡ್ ಪ್ರವೀಣ್ ಕೊರಯ ಇವರು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ತುಳುನಾಡಿನಲ್ಲಿ ಆಟಿ ತಿಂಗಳಿನಲ್ಲಿ ಮಾಡುವ ವಿವಿಧ ಆಹಾರ ಪದಾರ್ಥಗಳ ಪ್ರದರ್ಶನ, ಆಟಿಯಲ್ಲಿ ಆಡುವಂತಹ ಆಟಗಳು ಮತ್ತು ತುಳುನಾಡಿನ ಆಟಿ ತಿಂಗಳ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವಿವಿಧ ರೀತಿಯ ಪ್ರದರ್ಶನವನ್ನು ಕಾಲೇಜಿನ ವಿದ್ಯಾರ್ಥಿಗಳು ಏರ್ಪಡಿಸಿದ್ದರು.

ಈ ಸಂದರ್ಭದಲ್ಲಿ ವಿವಿಧ ತರಗತಿಗಳಿಗೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು . ನಿರ್ವಹಣಾ ಶಾಸ್ತ್ರದ ಮುಖ್ಯಸ್ಥರಾದ ಪ್ರೊ. ರಶ್ಮಿ ಇವರು ಆಟಿ ತಿಂಗಳ ವಿಶೇಷತೆ ಮತ್ತು ಆ ತಿಂಗಳಲ್ಲಿ ಉಪಯೋಗಿಸುವ ಆಹಾರ ಪದಾರ್ಥಗಳ ಹಿಂದೆ ಇರುವ ವೈಜ್ಞಾನಿಕತೆ ಬಗ್ಗೆ ಸವಿವರವಾಗಿ ತಿಳಿಸಿದರು. ಐಕ್ಯೂ ಎಸಿ ಸಂಚಾಲಕರಾದ ಡಾಕ್ಟರ್ ಕುಶಾಲಪ್ಪ ಎಸ್ ಇವರು ತುಳುನಾಡಿನ ಆಟಿ ಸಂಸ್ಕೃತಿಯ ಬಗ್ಗೆ ತಿಳಿಸಿದರು. ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ರೋವರ್ ಸ್ಕೌಟ್ ಲೀಡರ್ ಡಾ. ರವಿ ಎಂ. ಎನ್. ಹಾಗೂ ರೇಂಜರ್ ಲೀಡರ್ ಡಾ. ರಾಜೇಶ್ವರಿ ಎಚ್. ಎಸ್. ಕಾರ್ಯಕ್ರಮದ ಆಯೋಜನೆಯನ್ನು ಮಾಡಿದರು.

ವೇದಿಕೆಯಲ್ಲಿ ಗ್ರಂಥಪಾಲಕರಾದ ಶ್ರೀಯುತ ಜಗದೀಶ್ ಎಸ್ ಹಾಗೂ ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಪ್ರೊ. ಮಾರುತಿ ಜಿ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದ ತೀರ್ಪುಗಾರರಾಗಿ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಧಾಕೃಷ್ಣ ಹೆಚ್. ಬಿ., ಶ್ರೀಯುತ ಜಗದೀಶ್ ಎಸ್., ಪ್ರೊ. ರಶ್ಮಿ ಎಚ್., ಶ್ರೀ ಸುರೇಶ್ ಡಿ ಮತ್ತು ಶ್ರೀಮತಿ ವಿಜಯಲಕ್ಷ್ಮಿ ರಾವ್ ಇವರು ಭಾಗವಹಿಸಿದ್ದರು. ಅಂತಿಮ ಬಿಕಾಂನ ಕೌಶಿಕ್ ಶೆಟ್ಟಿ ಸ್ವಾಗತಿಸಿ ಶುಭವತಿ ಇವರು ಕಾರ್ಯಕ್ರಮ ನಿರ್ವಹಿಸಿದರು.

Related posts

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೂಪರ್ 30 – ಪ್ರವೇಶ ಪರೀಕ್ಷೆ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಸರ್ಕಾರಿ ಪ್ರೌಢಶಾಲೆ ವೇಣೂರುನಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ: ಪುಷ್ಪಾರ್ಚನೆ ಹಾಗೂ ಮೆರವಣಿಗೆ ಮೂಲಕ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya
error: Content is protected !!