23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯದ ಮಹಾಸಭೆ

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯ ಇದರ ಮಹಾಸಭೆಯು ಸುಂದರಾಚಾರ್ಯ ಕುದ್ಯಾಡಿ ಅವರ ಅಧ್ಯಕ್ಷತೆಯಲ್ಲಿ ಆ.17ರಂದು ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗುರು ಸೇವಾ ಪರಿಷತ್ತಿನ ಅಧ್ಯಕ್ಷ ಪ್ರಕಾಶ್ ಪುರೋಹಿತ್ ವೇಣೂರು ದೀಪ ಬೆಳಗಿಸಿ ಸಂಘಟನೆಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಹಣ ಸಂಗ್ರಹಣೆ, ಗ್ರಾಮ ಸಮಿತಿ ಜೋಡಣೆ, ಸಂಘಟನಾತ್ಮಕವಾದ ಕಾರ್ಯ ಚಟುವಟಿಕೆಗಳನ್ನು ಮಾಡಬೇಕು ಎಂದು ತಿಳಿಸಿದರು.

ಸರ್ವಾನುಮತದಿಂದ ವಲಯ ಸಂಚಾಲಕರಾಗಿ ಸಂಜೀವ ಆಚಾರ್ಯ ಮಾಡೆoಜಿಮಾರ್ ಆಯ್ಕೆಯಾದರು. ಗ್ರಾ.ಪಂ. ಸದಸ್ಯ ಹರೀಶ್ ಆಚಾರ್ಯ, ರಮೇಶ್ ಆಚಾರ್ಯ ಬಳಂಜ, ಜಯರಾಮ್ ಆಚಾರ್ಯ ಕುದ್ಯಾಡಿ, ಸಂಜೀವ ಆಚಾರ್ಯ ಡೆಂಜೋಳಿ, ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಮಂಜುನಾಥ ಆಚಾರ್ಯ ವರದಿ ವಾಚನ, ಲೆಕ್ಕಚಾರ ಮಂಡಿಸಿದರು. ಶ್ರೀಮತಿ ತಾರಾ ಆಚಾರ್ಯ ಕುದ್ಯಾಡಿ ಸ್ವಾಗತಿಸಿದರು. ಅಶ್ವಥ್ ಆಚಾರ್ಯ ಕೆದ್ದು ಪ್ರಾರ್ಥಿಸಿದರು. ಮಂಜುನಾಥ ಆಚಾರ್ಯ ಅಳದಂಗಡಿ ನಿರೂಪಿಸಿ, ವಂದಿಸಿದರು.

Related posts

ಮಾ.9 : ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

Suddi Udaya

ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

Suddi Udaya

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

Suddi Udaya

ರಂಜಿತ್ ಎಚ್ ಡಿ ಬಳಂಜರವರಿಗೆ ಜೆಸಿಯ ವಲಯ 15ರ ಸಾಧನಾ ಶ್ರೀ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

Suddi Udaya
error: Content is protected !!