July 23, 2026
ವರದಿ

ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯದ ಮಹಾಸಭೆ

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯ ಇದರ ಮಹಾಸಭೆಯು ಸುಂದರಾಚಾರ್ಯ ಕುದ್ಯಾಡಿ ಅವರ ಅಧ್ಯಕ್ಷತೆಯಲ್ಲಿ ಆ.17ರಂದು ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗುರು ಸೇವಾ ಪರಿಷತ್ತಿನ ಅಧ್ಯಕ್ಷ ಪ್ರಕಾಶ್ ಪುರೋಹಿತ್ ವೇಣೂರು ದೀಪ ಬೆಳಗಿಸಿ ಸಂಘಟನೆಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಹಣ ಸಂಗ್ರಹಣೆ, ಗ್ರಾಮ ಸಮಿತಿ ಜೋಡಣೆ, ಸಂಘಟನಾತ್ಮಕವಾದ ಕಾರ್ಯ ಚಟುವಟಿಕೆಗಳನ್ನು ಮಾಡಬೇಕು ಎಂದು ತಿಳಿಸಿದರು.

ಸರ್ವಾನುಮತದಿಂದ ವಲಯ ಸಂಚಾಲಕರಾಗಿ ಸಂಜೀವ ಆಚಾರ್ಯ ಮಾಡೆoಜಿಮಾರ್ ಆಯ್ಕೆಯಾದರು. ಗ್ರಾ.ಪಂ. ಸದಸ್ಯ ಹರೀಶ್ ಆಚಾರ್ಯ, ರಮೇಶ್ ಆಚಾರ್ಯ ಬಳಂಜ, ಜಯರಾಮ್ ಆಚಾರ್ಯ ಕುದ್ಯಾಡಿ, ಸಂಜೀವ ಆಚಾರ್ಯ ಡೆಂಜೋಳಿ, ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಮಂಜುನಾಥ ಆಚಾರ್ಯ ವರದಿ ವಾಚನ, ಲೆಕ್ಕಚಾರ ಮಂಡಿಸಿದರು. ಶ್ರೀಮತಿ ತಾರಾ ಆಚಾರ್ಯ ಕುದ್ಯಾಡಿ ಸ್ವಾಗತಿಸಿದರು. ಅಶ್ವಥ್ ಆಚಾರ್ಯ ಕೆದ್ದು ಪ್ರಾರ್ಥಿಸಿದರು. ಮಂಜುನಾಥ ಆಚಾರ್ಯ ಅಳದಂಗಡಿ ನಿರೂಪಿಸಿ, ವಂದಿಸಿದರು.

Related posts

ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶ

Suddi Udaya

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya

ಬೆಳ್ತಂಗಡಿ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ಹಸ್ತಾಂತರ

Suddi Udaya

ಸಂಜೀವಿನಿ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸರಕಾರದಿಂದ ಸಮ್ಮತಿ

Suddi Udaya
error: Content is protected !!