37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿಯ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿರುವ ಹಿರಿಯರಾದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರಾದಬಿ ಎಲ್ ಸಂತೋಷ್ ರವರನ್ನು ನಿಂದಿಸುವ ಕೆಲಸವನ್ನು ನಗರ ನಕ್ಸಲರು ಮಾಡಿದ್ದಾರೆ. ಇಂತಹ ಹಿಂದೂ ನಾಯಕರ ಹಾಗೂ ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಎಂದು ಶಾಸಕ ಹರೀಶ್ ಪೂಂಜ ಆಗ್ರಹಿಸಿದರು.

ಅವರು ಭಾನುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ರಾಷ್ಟ್ರೀಯ ಸ್ವಯಂ ಸೇವಾ ಸಂಘ ಒಂದು ಸಮಾಜವನ್ನು ಒಂದೇ ಮನೆ ಅಂತ ಕಾಣುವ ಸಂಘಟನೆ ಆಗಿದ್ದು ಇದರ ಪ್ರತಿಯೊಬ್ಬ ಸೇವಕ ರಾಷ್ಟ್ರೀಯತೆ, ಬಾಷೆ, ಧರ್ಮ ,ಸಂಸ್ಕತಿ ಉಳಿವಿಗಾಗಿ ಸರ್ವಸ್ವವನ್ನು ತ್ಯಾಗಮಾಡಿದವರು.ಅದರಲ್ಲಿ ಹಿರಿಯರಾದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಕೂಡ, ಇವರ ವಿರುದ್ದ ನಗರ ನಕ್ಸಲ್ ರು ಅಶ್ಲೀಲ, ಅನಾಗರಿಕ ಹಾಗೂ ಅಕ್ಷಮ್ಯವಾಗಿ ಅವಮಾನಿಸುವ ಹೇಳಿಕೆ ನೀಡಿರುವುದನ್ನು ಒಬ್ಬ ಸ್ವಯಂ ಸೇವಕನಾಗಿ ,ಬಿಜೆಪಿ ಪಕ್ಷದ ಶಾಸಕನಾಗಿ ಅತ್ಯಂತ ಕಟು ಶಬ್ದಗಳಲ್ಲಿ ಖಂಡಿಸುತ್ತೇನೆ ಎಂದು ಹೇಳಿದರು.

ಸಂತೋಷ್ ಅವರಿಗೆ ಮಾಡಿದ ಅವಮಾನ ಇಡೀ ಸ್ವಯಂ ಸೇವಕ ತಂಡಕ್ಕೆ ಮಾಡಿದ ಅವಮಾನ, ಹಿಂದೂಗಳ ನಡುವೆ ಕಂದಕ ಸೃಷ್ಟಿಸಿ, ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರಗಳ ಮೇಲೆ ಕಪೋಲ ಕಲ್ಪಿತ ಷಡ್ಯಂತ್ರ ರೂಪಿಸುವ, ಹಿಂದೂ ಭಾವನೆಗಳಿಗೆ ಘಾಸಿಯುಂಟು ಮಾಡುವ, ಹಿಂದೂ ಸಮಾಜವನ್ನು ಒಡೆಯುವ ನಗರ ನಕ್ಸಲರ ಪಿತೂರಿಯೇ ಈ ನಿಂದನೆ ಆಗಿದೆ.ಹಿಂದೂ ದಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡುವ ಇಂತವರು ಜಿಹಾದಿಗಳು,ಮತಾಂದ ಶಕ್ತಿಗಳ ಮನಸ್ಥಿಯುಳ್ಳವರಾಗಿದ್ದು , ಹಿಂದುಗಳನ್ನು ತೇಜೊವಧೆ ಮಾಡುವವರನ್ನು ಸರಕಾರ ಸುಮೊಟೊ ಕೇಸ್ ಹಾಕದೆ ಬಿಟ್ಡಿರುವುದೇ ಈ ರೀತಿ ಹೇಳಿಕೆ ಕೊಡುವಷ್ಟು ಬೆಳೆದಿದ್ದಾರೆ. ಇಂತಹ ನೀಚ ಮನಸ್ಥಿತಿ ಉಳ್ಳವರು , ಕಮ್ಯೂನಿಸ್ಟ್ ವಿಚಾರಧಾರೆಗೆ ಒಳಗಾಗಿ ಈ ನೆಲದ ಮೂಲ ಸತ್ವವನ್ನು ಮುಗಿಸಲು ನಗರ ನಕ್ಸಲರು ವಿಭಿನ್ನ ಪ್ರಯತ್ನದ ಜೊತೆಗೆ ಸಮಾಜದ ದಾರಿ ತಪ್ಪಿಸುವ ಹೋರಾಟಕ್ಕೆ ಇಳಿದಿದ್ದಾರೆ ಎಂದು ಆರೋಪಿಸಿದರು.

ಸೌಜನ್ಯ ಪ್ರಕರಣ ಮರು ತನಿಕೆಯಾಗಲಿ: ಸೌಜನ್ಯ ಸಾವಿಗೆ ನ್ಯಾಯ ಸಿಗಬೇಕು ಎಂದು ಬಿಜೆಪಿ ಹಿಂದೆಯೇ ಹೋರಾಟ ಮಾಡಿದೆ. ಕರಾವಳಿ ಶಾಸಕರು ಈ ಬಗ್ಗೆ ಮುಖ್ಯ ಮಂತ್ರಿಗಳನ್ನು ಬೇಟಿಯಾಗಿ ಮನವಿ ನೀಡಿದ್ದೇವೆ. ಅದಿವೇಶನದಲ್ಲಿಯೂ ಈ ಬಗ್ಗೆ ಪ್ರಸ್ತಾಪ ಮಾಡಿದ್ದೇನೆ. ಪೋಲಿಸ್ ಇಲಾಖೆಯ ವೈಫಲ್ಯ ದಿಂದ ಈ ಸ್ಥಿತಿಯಾಗಿದೆ. ಈ ಪ್ರಕರಣದ ಮರು ತನಿಖೆಯಾಗಲಿ ಎಸ್ ಐಟಿ ಅಥವಾ ಯಾವುದೇ ಇತರ ತನಿಖಾ ತಂಡ ಮರು ತನಿಖೆಗೆ ಮಾಡಿ ನೈಜ ಆರೋಪಿಗಳು ಪತ್ತೆಯಾಗಿ, ಜೈಲು ಶಿಕ್ಷೆ ಅಗಲಿ ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅದ್ಯಕ್ಷ ಶ್ರೀನಿವಾಸ್ , ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೊಟ್ಯಾನ್ ಉಪಸ್ಥಿತರಿದ್ದರು.

Related posts

ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ

Suddi Udaya

ತಣ್ಣೀರುಪಂತ : ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನಕ್ಕೆ ಧಾರ್ಮಿಕ ಮುಂದಾಳು, ಉದ್ಯಮಿ ಶಶಿಧರ ಶೆಟ್ಟಿ ಭೇಟಿ

Suddi Udaya

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya

ಉತ್ತರಾಖಂಡ ಸುರಖಂಡ ಶಕ್ತಿ ಪೀಠಕ್ಕೆ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಭೇಟಿ

Suddi Udaya

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

Suddi Udaya
error: Content is protected !!