September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿಯ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿರುವ ಹಿರಿಯರಾದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರಾದಬಿ ಎಲ್ ಸಂತೋಷ್ ರವರನ್ನು ನಿಂದಿಸುವ ಕೆಲಸವನ್ನು ನಗರ ನಕ್ಸಲರು ಮಾಡಿದ್ದಾರೆ. ಇಂತಹ ಹಿಂದೂ ನಾಯಕರ ಹಾಗೂ ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಎಂದು ಶಾಸಕ ಹರೀಶ್ ಪೂಂಜ ಆಗ್ರಹಿಸಿದರು.

ಅವರು ಭಾನುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ರಾಷ್ಟ್ರೀಯ ಸ್ವಯಂ ಸೇವಾ ಸಂಘ ಒಂದು ಸಮಾಜವನ್ನು ಒಂದೇ ಮನೆ ಅಂತ ಕಾಣುವ ಸಂಘಟನೆ ಆಗಿದ್ದು ಇದರ ಪ್ರತಿಯೊಬ್ಬ ಸೇವಕ ರಾಷ್ಟ್ರೀಯತೆ, ಬಾಷೆ, ಧರ್ಮ ,ಸಂಸ್ಕತಿ ಉಳಿವಿಗಾಗಿ ಸರ್ವಸ್ವವನ್ನು ತ್ಯಾಗಮಾಡಿದವರು.ಅದರಲ್ಲಿ ಹಿರಿಯರಾದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಕೂಡ, ಇವರ ವಿರುದ್ದ ನಗರ ನಕ್ಸಲ್ ರು ಅಶ್ಲೀಲ, ಅನಾಗರಿಕ ಹಾಗೂ ಅಕ್ಷಮ್ಯವಾಗಿ ಅವಮಾನಿಸುವ ಹೇಳಿಕೆ ನೀಡಿರುವುದನ್ನು ಒಬ್ಬ ಸ್ವಯಂ ಸೇವಕನಾಗಿ ,ಬಿಜೆಪಿ ಪಕ್ಷದ ಶಾಸಕನಾಗಿ ಅತ್ಯಂತ ಕಟು ಶಬ್ದಗಳಲ್ಲಿ ಖಂಡಿಸುತ್ತೇನೆ ಎಂದು ಹೇಳಿದರು.

ಸಂತೋಷ್ ಅವರಿಗೆ ಮಾಡಿದ ಅವಮಾನ ಇಡೀ ಸ್ವಯಂ ಸೇವಕ ತಂಡಕ್ಕೆ ಮಾಡಿದ ಅವಮಾನ, ಹಿಂದೂಗಳ ನಡುವೆ ಕಂದಕ ಸೃಷ್ಟಿಸಿ, ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರಗಳ ಮೇಲೆ ಕಪೋಲ ಕಲ್ಪಿತ ಷಡ್ಯಂತ್ರ ರೂಪಿಸುವ, ಹಿಂದೂ ಭಾವನೆಗಳಿಗೆ ಘಾಸಿಯುಂಟು ಮಾಡುವ, ಹಿಂದೂ ಸಮಾಜವನ್ನು ಒಡೆಯುವ ನಗರ ನಕ್ಸಲರ ಪಿತೂರಿಯೇ ಈ ನಿಂದನೆ ಆಗಿದೆ.ಹಿಂದೂ ದಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡುವ ಇಂತವರು ಜಿಹಾದಿಗಳು,ಮತಾಂದ ಶಕ್ತಿಗಳ ಮನಸ್ಥಿಯುಳ್ಳವರಾಗಿದ್ದು , ಹಿಂದುಗಳನ್ನು ತೇಜೊವಧೆ ಮಾಡುವವರನ್ನು ಸರಕಾರ ಸುಮೊಟೊ ಕೇಸ್ ಹಾಕದೆ ಬಿಟ್ಡಿರುವುದೇ ಈ ರೀತಿ ಹೇಳಿಕೆ ಕೊಡುವಷ್ಟು ಬೆಳೆದಿದ್ದಾರೆ. ಇಂತಹ ನೀಚ ಮನಸ್ಥಿತಿ ಉಳ್ಳವರು , ಕಮ್ಯೂನಿಸ್ಟ್ ವಿಚಾರಧಾರೆಗೆ ಒಳಗಾಗಿ ಈ ನೆಲದ ಮೂಲ ಸತ್ವವನ್ನು ಮುಗಿಸಲು ನಗರ ನಕ್ಸಲರು ವಿಭಿನ್ನ ಪ್ರಯತ್ನದ ಜೊತೆಗೆ ಸಮಾಜದ ದಾರಿ ತಪ್ಪಿಸುವ ಹೋರಾಟಕ್ಕೆ ಇಳಿದಿದ್ದಾರೆ ಎಂದು ಆರೋಪಿಸಿದರು.

ಸೌಜನ್ಯ ಪ್ರಕರಣ ಮರು ತನಿಕೆಯಾಗಲಿ: ಸೌಜನ್ಯ ಸಾವಿಗೆ ನ್ಯಾಯ ಸಿಗಬೇಕು ಎಂದು ಬಿಜೆಪಿ ಹಿಂದೆಯೇ ಹೋರಾಟ ಮಾಡಿದೆ. ಕರಾವಳಿ ಶಾಸಕರು ಈ ಬಗ್ಗೆ ಮುಖ್ಯ ಮಂತ್ರಿಗಳನ್ನು ಬೇಟಿಯಾಗಿ ಮನವಿ ನೀಡಿದ್ದೇವೆ. ಅದಿವೇಶನದಲ್ಲಿಯೂ ಈ ಬಗ್ಗೆ ಪ್ರಸ್ತಾಪ ಮಾಡಿದ್ದೇನೆ. ಪೋಲಿಸ್ ಇಲಾಖೆಯ ವೈಫಲ್ಯ ದಿಂದ ಈ ಸ್ಥಿತಿಯಾಗಿದೆ. ಈ ಪ್ರಕರಣದ ಮರು ತನಿಖೆಯಾಗಲಿ ಎಸ್ ಐಟಿ ಅಥವಾ ಯಾವುದೇ ಇತರ ತನಿಖಾ ತಂಡ ಮರು ತನಿಖೆಗೆ ಮಾಡಿ ನೈಜ ಆರೋಪಿಗಳು ಪತ್ತೆಯಾಗಿ, ಜೈಲು ಶಿಕ್ಷೆ ಅಗಲಿ ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅದ್ಯಕ್ಷ ಶ್ರೀನಿವಾಸ್ , ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೊಟ್ಯಾನ್ ಉಪಸ್ಥಿತರಿದ್ದರು.

Related posts

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವ ಹಾಗೂ ಶಾಸಕರ ಅನುದಾನದಡಿಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನ ನಿರ್ಮಾಣದ ಶಿಲಾನ್ಯಾಸ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya

ಜೆಸಿಐ ಭಾರತದ ವಲಯ 15ರ ವಲಯ ಸಮ್ಮೇಳನ : ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ಸೇರಿದಂತೆ ಹಲವು ಪ್ರಶಸ್ತಿ

Suddi Udaya

ಎಸ್‌ಡಿಎಂ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಪದಪ್ರದಾನ ಕಾರ್ಯಕ್ರಮ

Suddi Udaya
error: Content is protected !!