September 6, 2026
ಧಾರ್ಮಿಕವರದಿಸರ್ಕಾರಿ ಇಲಾಖಾ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ : ಎಸ್.ಐ.ಟಿ ತನಿಖೆ ಹೆಸರಿನಲ್ಲಿ ಶ್ರೀ ಕ್ಷೇತ್ರದ ವಿರುದ್ಧ ವ್ಯವಸ್ಥಿತ ಪಿತೂರಿ: ವಿಜಯೇಂದ್ರ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಎಸ್‌ಐಟಿ ನಡೆಸುತ್ತಿರುವ ತನಿಖೆಯನ್ನು ಶೀಘ್ರ ಮುಗಿಸಬೇಕು. ಸತ್ಯಾಸತ್ಯತೆ ಬಹಿರಂಗ ಪಡಿಸಿ. ಗೊಂದಲಗಳಿಗೆ ಅತಿ ಶೀಘ್ರವೇ ತೆರೆ ಬೀಳಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಅವರು ಆ.17ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಎಸ್ ಐಟಿ ತನಿಖೆಗೆ ‌‌ನಮ್ಮ ಸ್ವಾಗತವಿದೆ ಆದರೆ ತನಿಖೆ ಹೆಸರಿನಲ್ಲಿ ಧಮ೯ಸ್ಥಳ ಕ್ಷೇತ್ರದ ಬಗ್ಗೆ ಬಹಳಷ್ಟು ಅಪಪ್ರಚಾರ ಮಾಡುತ್ತಿದ್ದಾರೆ. ಕ್ಷೇತ್ರದ ವಿರುದ್ಧ ವ್ಯವಸ್ಥಿತ ಪಿತೂರಿ ನಡೆಸಲಾಗಿದೆ. ಇವುಗಳನ್ನು ತಡೆಗಟ್ಟ ಬೇಕು ಎಲ್ಲ ಗೊಂದಲಗಳಿಗೆ ಶೀಘ್ರ ತೆರೆ ಎಳೆಯಬೇಕು, ಸರ್ಕಾರ ತಕ್ಷಣ ಇದಕ್ಕೆ ಸ್ಪಂದಿಸಬೇಕು ಎಂದರು.

ಬಳಿಕ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ನಾಯಕರು, ಸಂಸದರು ಹಾಗೂ ಶಾಸಕರಗಳು ಇದ್ದರು. ಪ್ರಮುಖರಾದ ಛಲವಾದಿ ನಾರಾಯಣ ಸ್ವಾಮಿ ಸಿ . ಟಿ ರವಿ, ಕ್ಯಾ.ಬೃಜೇಶ್ ಚೌಟ, ಹರೀಶ್ ಪೂಂಜಾ, ಭಾಗೀರಥಿ ಮುರುಳ್ಯ, ಭರತ್ ಶೆಟ್ಟಿ , ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳಿ , ಎಸ್.ಆರ್ ವಿಶ್ವನಾಥ್, ಧನಂಜಯ ಸರ್ಜಿ, ಕಿಶೋರ್ ಕುಮಾರ್ ಬೊಟ್ಯಾಡಿ,ಕಿರಣ್ ಕೊಡ್ಗಿ,ಪ್ರತಾಪ್ ಸಿಂಹ ನಾಯಕ್,ಉಮಾನಾಥ್ ಕೋಟ್ಯಾನ್ರವಿಕುಮಾರ್, ಮೈಸೂರು ಎಂ.ಎಲ್.ಎ ಶ್ರೀ ವಾತ್ಸವ ಅಪಾರ ಸಂಖ್ಯೆಯಲ್ಲಿ ಪಕ್ಷದ ನಾಯಕರು ಉಪಸ್ಥಿತರಿದ್ದರು.

ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ;
ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಶನಿವಾರ ‘ಧರ್ಮಸ್ಥಳ ಚಲೋ’ ಅಭಿಯಾನ ನಡೆದಿದ್ದು,
ಬೆಂಗಳೂರಿನಿಂದ ಸುಮಾರು 400ಕ್ಕೂ ಹೆಚ್ಚು ವಾಹನಗಳಲ್ಲಿ
ಸುಮಾರು ಎರಡು ಸಾವಿರ ಭಕ್ತರು ಯಲಹಂಕ ಕ್ಷೇತ್ರದ ಭಕ್ತರೊಂದಿಗೆ ಆಗಮಿಸಿದ್ದರು.
ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ಕೆಲವು ಯೂಟ್ಯೂಬರ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ನಡೆಸುತ್ತಿರುವ ಪಿತೂರಿ ಖಂಡಿಸಿ ಈ ಬೃಹತ್ ಯಾತ್ರೆ ಕೈಗೊಂಡಿದ್ದರು.

.

Related posts

ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಉಜಿರೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲಾಕ್ಮಿ ಕಂಪನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya

ಅಂತರಾಜ್ಯ ಗಣಿತ ಜ್ಞಾನ ತರಬೇತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya
error: Content is protected !!