ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಜನಪ್ರಿಯ ಶಾಸಕ ಹಾಗೂ ಅಭಿವೃದ್ಧಿಯ ಹರಿಕಾರ ಹರೀಶ್ ಪೂಂಜ ಅವರ ಹುಟ್ಟು ಹಬ್ಬ ಆಚರಣೆ ಕಾಯ೯ಕ್ರಮ ಆ.17 ರಂದು ಉಜಿರೆ ಓಷಿಯನ್ ಪಲ್೯ ಸಭಾಂಗಣದಲ್ಲಿ ಸಂಭ್ರಮ ಸಡಗರದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ಜರುಗಿತು. ಕೇಕ್ ಕತ್ತರಿಸುವ ಮೂಲಕ ಹುಟ್ಟು ಹಬ್ಬದ ಸಂಭ್ರಮ ನಡೆಯಿತು.ಭಾಗವಹಿಸಿದ್ದ ಪಕ್ಷದ ಪ್ರಮುಖರು, ಗಣ್ಯರು ಶಾಸಕರಿಗೆ ಹುಟ್ಟು ಹಬ್ಬದ ಶುಭ ಹಾರೈಸಿದರು.

ಕಾಯ೯ಕ್ರಮದಲ್ಲಿ ಛಲವಾದಿ ನಾರಾಯಣ ಸ್ವಾಮಿ, ಕ್ಯಾ.ಬೃಜೇಶ್ ಚೌಟ,ಭಾಗೀರಥಿ ಮುರುಳ್ಯ, ಭರತ್ ಶೆಟ್ಟಿ, ವೇದವ್ಯಾಸ ಕಾಮತ್,ರಾಜೇಶ್ ನಾಯ್ಕ್, ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳಿ, ಎಸ್.ಆರ್ ವಿಶ್ವನಾಥ್,ಧನಂಜಯ ಸರ್ಜಿ,ಕಿಶೋರ್ ಕುಮಾರ್ ಬೊಟ್ಯಾಡಿ,ಕಿರಣ್ ಕೊಡ್ಗಿ, ಪ್ರತಾಪ್ ಸಿಂಹ ನಾಯಕ್, ಉಮಾನಾಥ್ ಕೋಟ್ಯಾನ್ , ರವಿಕುಮಾರ್, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಗಣೇಶ್ ಗೌಡ, ಸುಂದರ ಹೆಗ್ಡೆ, ರಾಜೇಶ್ ಪೂಜಾರಿ, ಉದ್ಯಮಿಗಳಾದ ಮೋಹನ್ ಕುಮಾರ್, ರಾಜೇಶ್ ಪೈ,ಗಣ್ಯರು ಉಪಸ್ಥಿತರಿದ್ದರು.











