32.9 C
ಪುತ್ತೂರು, ಬೆಳ್ತಂಗಡಿ
March 6, 2026
ಶಾಲಾ ಕಾಲೇಜು

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್-ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಮತ್ತು ಸಾಂಸ್ಕೃತಿಕ ವೇದಿಕೆ ಇವುಗಳ ಸಹಯೋಗದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ರೊನಾಲ್ಡ್ ಪ್ರವೀಣ್ ಕೊರಯ ಇವರು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ತುಳುನಾಡಿನಲ್ಲಿ ಆಟಿ ತಿಂಗಳಿನಲ್ಲಿ ಮಾಡುವ ವಿವಿಧ ಆಹಾರ ಪದಾರ್ಥಗಳ ಪ್ರದರ್ಶನ, ಆಟಿಯಲ್ಲಿ ಆಡುವಂತಹ ಆಟಗಳು ಮತ್ತು ತುಳುನಾಡಿನ ಆಟಿ ತಿಂಗಳ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವಿವಿಧ ರೀತಿಯ ಪ್ರದರ್ಶನವನ್ನು ಕಾಲೇಜಿನ ವಿದ್ಯಾರ್ಥಿಗಳು ಏರ್ಪಡಿಸಿದ್ದರು.

ಈ ಸಂದರ್ಭದಲ್ಲಿ ವಿವಿಧ ತರಗತಿಗಳಿಗೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು . ನಿರ್ವಹಣಾ ಶಾಸ್ತ್ರದ ಮುಖ್ಯಸ್ಥರಾದ ಪ್ರೊ. ರಶ್ಮಿ ಇವರು ಆಟಿ ತಿಂಗಳ ವಿಶೇಷತೆ ಮತ್ತು ಆ ತಿಂಗಳಲ್ಲಿ ಉಪಯೋಗಿಸುವ ಆಹಾರ ಪದಾರ್ಥಗಳ ಹಿಂದೆ ಇರುವ ವೈಜ್ಞಾನಿಕತೆ ಬಗ್ಗೆ ಸವಿವರವಾಗಿ ತಿಳಿಸಿದರು. ಐಕ್ಯೂ ಎಸಿ ಸಂಚಾಲಕರಾದ ಡಾಕ್ಟರ್ ಕುಶಾಲಪ್ಪ ಎಸ್ ಇವರು ತುಳುನಾಡಿನ ಆಟಿ ಸಂಸ್ಕೃತಿಯ ಬಗ್ಗೆ ತಿಳಿಸಿದರು. ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ರೋವರ್ ಸ್ಕೌಟ್ ಲೀಡರ್ ಡಾ. ರವಿ ಎಂ. ಎನ್. ಹಾಗೂ ರೇಂಜರ್ ಲೀಡರ್ ಡಾ. ರಾಜೇಶ್ವರಿ ಎಚ್. ಎಸ್. ಕಾರ್ಯಕ್ರಮದ ಆಯೋಜನೆಯನ್ನು ಮಾಡಿದರು.

ವೇದಿಕೆಯಲ್ಲಿ ಗ್ರಂಥಪಾಲಕರಾದ ಶ್ರೀಯುತ ಜಗದೀಶ್ ಎಸ್ ಹಾಗೂ ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಪ್ರೊ. ಮಾರುತಿ ಜಿ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದ ತೀರ್ಪುಗಾರರಾಗಿ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಧಾಕೃಷ್ಣ ಹೆಚ್. ಬಿ., ಶ್ರೀಯುತ ಜಗದೀಶ್ ಎಸ್., ಪ್ರೊ. ರಶ್ಮಿ ಎಚ್., ಶ್ರೀ ಸುರೇಶ್ ಡಿ ಮತ್ತು ಶ್ರೀಮತಿ ವಿಜಯಲಕ್ಷ್ಮಿ ರಾವ್ ಇವರು ಭಾಗವಹಿಸಿದ್ದರು. ಅಂತಿಮ ಬಿಕಾಂನ ಕೌಶಿಕ್ ಶೆಟ್ಟಿ ಸ್ವಾಗತಿಸಿ ಶುಭವತಿ ಇವರು ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀ ಯ ವಿಚಾರ ಸಂಕಿರಣ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಗೆ ಸತತ ಎಂಟನೇ ಬಾರಿ ಶೇ100 ಫಲಿತಾಂಶ

Suddi Udaya

ಬೆದ್ರಬೆಟ್ಟು: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!