July 23, 2026
ಶಾಲಾ ಕಾಲೇಜು

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್-ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಮತ್ತು ಸಾಂಸ್ಕೃತಿಕ ವೇದಿಕೆ ಇವುಗಳ ಸಹಯೋಗದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ರೊನಾಲ್ಡ್ ಪ್ರವೀಣ್ ಕೊರಯ ಇವರು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ತುಳುನಾಡಿನಲ್ಲಿ ಆಟಿ ತಿಂಗಳಿನಲ್ಲಿ ಮಾಡುವ ವಿವಿಧ ಆಹಾರ ಪದಾರ್ಥಗಳ ಪ್ರದರ್ಶನ, ಆಟಿಯಲ್ಲಿ ಆಡುವಂತಹ ಆಟಗಳು ಮತ್ತು ತುಳುನಾಡಿನ ಆಟಿ ತಿಂಗಳ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವಿವಿಧ ರೀತಿಯ ಪ್ರದರ್ಶನವನ್ನು ಕಾಲೇಜಿನ ವಿದ್ಯಾರ್ಥಿಗಳು ಏರ್ಪಡಿಸಿದ್ದರು.

ಈ ಸಂದರ್ಭದಲ್ಲಿ ವಿವಿಧ ತರಗತಿಗಳಿಗೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು . ನಿರ್ವಹಣಾ ಶಾಸ್ತ್ರದ ಮುಖ್ಯಸ್ಥರಾದ ಪ್ರೊ. ರಶ್ಮಿ ಇವರು ಆಟಿ ತಿಂಗಳ ವಿಶೇಷತೆ ಮತ್ತು ಆ ತಿಂಗಳಲ್ಲಿ ಉಪಯೋಗಿಸುವ ಆಹಾರ ಪದಾರ್ಥಗಳ ಹಿಂದೆ ಇರುವ ವೈಜ್ಞಾನಿಕತೆ ಬಗ್ಗೆ ಸವಿವರವಾಗಿ ತಿಳಿಸಿದರು. ಐಕ್ಯೂ ಎಸಿ ಸಂಚಾಲಕರಾದ ಡಾಕ್ಟರ್ ಕುಶಾಲಪ್ಪ ಎಸ್ ಇವರು ತುಳುನಾಡಿನ ಆಟಿ ಸಂಸ್ಕೃತಿಯ ಬಗ್ಗೆ ತಿಳಿಸಿದರು. ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ರೋವರ್ ಸ್ಕೌಟ್ ಲೀಡರ್ ಡಾ. ರವಿ ಎಂ. ಎನ್. ಹಾಗೂ ರೇಂಜರ್ ಲೀಡರ್ ಡಾ. ರಾಜೇಶ್ವರಿ ಎಚ್. ಎಸ್. ಕಾರ್ಯಕ್ರಮದ ಆಯೋಜನೆಯನ್ನು ಮಾಡಿದರು.

ವೇದಿಕೆಯಲ್ಲಿ ಗ್ರಂಥಪಾಲಕರಾದ ಶ್ರೀಯುತ ಜಗದೀಶ್ ಎಸ್ ಹಾಗೂ ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಪ್ರೊ. ಮಾರುತಿ ಜಿ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದ ತೀರ್ಪುಗಾರರಾಗಿ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಧಾಕೃಷ್ಣ ಹೆಚ್. ಬಿ., ಶ್ರೀಯುತ ಜಗದೀಶ್ ಎಸ್., ಪ್ರೊ. ರಶ್ಮಿ ಎಚ್., ಶ್ರೀ ಸುರೇಶ್ ಡಿ ಮತ್ತು ಶ್ರೀಮತಿ ವಿಜಯಲಕ್ಷ್ಮಿ ರಾವ್ ಇವರು ಭಾಗವಹಿಸಿದ್ದರು. ಅಂತಿಮ ಬಿಕಾಂನ ಕೌಶಿಕ್ ಶೆಟ್ಟಿ ಸ್ವಾಗತಿಸಿ ಶುಭವತಿ ಇವರು ಕಾರ್ಯಕ್ರಮ ನಿರ್ವಹಿಸಿದರು.

Related posts

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ, ರಂಗ ತರಬೇತಿ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ

Suddi Udaya
error: Content is protected !!