22.6 C
ಪುತ್ತೂರು, ಬೆಳ್ತಂಗಡಿ
July 23, 2026
ವರದಿ

ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯದ ಮಹಾಸಭೆ

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯ ಇದರ ಮಹಾಸಭೆಯು ಸುಂದರಾಚಾರ್ಯ ಕುದ್ಯಾಡಿ ಅವರ ಅಧ್ಯಕ್ಷತೆಯಲ್ಲಿ ಆ.17ರಂದು ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗುರು ಸೇವಾ ಪರಿಷತ್ತಿನ ಅಧ್ಯಕ್ಷ ಪ್ರಕಾಶ್ ಪುರೋಹಿತ್ ವೇಣೂರು ದೀಪ ಬೆಳಗಿಸಿ ಸಂಘಟನೆಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಹಣ ಸಂಗ್ರಹಣೆ, ಗ್ರಾಮ ಸಮಿತಿ ಜೋಡಣೆ, ಸಂಘಟನಾತ್ಮಕವಾದ ಕಾರ್ಯ ಚಟುವಟಿಕೆಗಳನ್ನು ಮಾಡಬೇಕು ಎಂದು ತಿಳಿಸಿದರು.

ಸರ್ವಾನುಮತದಿಂದ ವಲಯ ಸಂಚಾಲಕರಾಗಿ ಸಂಜೀವ ಆಚಾರ್ಯ ಮಾಡೆoಜಿಮಾರ್ ಆಯ್ಕೆಯಾದರು. ಗ್ರಾ.ಪಂ. ಸದಸ್ಯ ಹರೀಶ್ ಆಚಾರ್ಯ, ರಮೇಶ್ ಆಚಾರ್ಯ ಬಳಂಜ, ಜಯರಾಮ್ ಆಚಾರ್ಯ ಕುದ್ಯಾಡಿ, ಸಂಜೀವ ಆಚಾರ್ಯ ಡೆಂಜೋಳಿ, ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಮಂಜುನಾಥ ಆಚಾರ್ಯ ವರದಿ ವಾಚನ, ಲೆಕ್ಕಚಾರ ಮಂಡಿಸಿದರು. ಶ್ರೀಮತಿ ತಾರಾ ಆಚಾರ್ಯ ಕುದ್ಯಾಡಿ ಸ್ವಾಗತಿಸಿದರು. ಅಶ್ವಥ್ ಆಚಾರ್ಯ ಕೆದ್ದು ಪ್ರಾರ್ಥಿಸಿದರು. ಮಂಜುನಾಥ ಆಚಾರ್ಯ ಅಳದಂಗಡಿ ನಿರೂಪಿಸಿ, ವಂದಿಸಿದರು.

Related posts

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಬಂಗಾಡಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ತ್ರಿಶಲ ಜೈನ್ ಅವರಿಗೆ ಭಾರತ್ ಸ್ಕೌಟ್ ಗೈಡ್ ಎ.ಎಲ್.ಟಿ ಅರ್ಹತೆ

Suddi Udaya

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya
error: Content is protected !!