25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಸುರ್ಯ ರಸ್ತೆಯ ಪಡುವೆಟ್ಟು ಜನವಸತಿ ಪ್ರದೇಶಕ್ಕೆ ‘ಕೃಷ್ಣನಗರ’ ನಾಮಫಲಕ ಅನಾವರಣ

ಉಜಿರೆ: ಇಲ್ಲಿಯ ಸುರ್ಯ ರಸ್ತೆಯ ಪಡುವೆಟ್ಟು ಸಮೀಪದ ಜನವಸತಿ ಪ್ರದೇಶಕ್ಕೆ ನೂತನವಾಗಿ ‘ಕೃಷ್ಣನಗರ’ ಎಂದು ನಾಮಫಲಕ ಅನಾವರಣ ಮಾಡಲಾಯಿತು.

ಕಾರ್ಯಕ್ರಮದ ಉದ್ಘಾಟನೆ ಮತ್ತು ನಾಮಫಲಕ ಅನಾವರಣ ವನ್ನು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ಅವರು ನೆರವೇರಿಸಿ ಶುಭಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್ ಬರೆಮೇಲು, ವಹಿಸಿ ಉತ್ತಮವಾಗಿ ಕಾರ್ಯಕ್ರಮ ಸಂಘಟಿಸಿದ ಸ್ಥಳೀಯ ನಿವಾಸಿಗಳನ್ನು ಶ್ಲಾಘಿಸಿದರು.

ವೇದಿಕೆಯಲ್ಲಿ ಗ್ರಾ.ಪಂ ಸದಸ್ಯರುಗಳಾದ ಜಯರಾಮ ಗೌಡ, ಪ್ರಮೀಳಾ, ಮಂಜುಳ, ಕಮಲ, ಚೇತನ ಉಪಸ್ಥಿತರಿದ್ದರು.

ಜಯಪ್ರಕಾಶ್ ರಾವ್ ಸಂಘಟಿಸಿದ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಕೃಷ್ಣ ಕುಮಾರ್ ಸ್ವಾಗತಿಸಿ, ಗ್ರಾಮ ಆಡಳಿತ ಅಧಿಕಾರಿ ಕಾವ್ಯಶ್ರೀ ಧನ್ಯವಾದವಿತ್ತರು. ಶಿಕ್ಷಕ ಕೃಷ್ಣ ಕುಮಾರ್ ನಿರೂಪಿಸಿದರು.

Related posts

ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘದ ವಾರ್ಷಿಕ ಮಹಾಸಭೆ: ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ನ.15: ಉಜಿರೆಯ ಶ್ರೀ ಧ.ಮ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಹಳೇ ನಾಣ್ಯಗಳು ಹಾಗೂ ಪುರಾತನ ವಸ್ತುಗಳ ಪ್ರದರ್ಶನ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಾಗಾರ: 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

Suddi Udaya

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

Suddi Udaya

ಉಜಿರೆ : ಅತ್ತಾಜೆ ಶತಾಯುಷಿ ಬಿಫಾತಿಮಾ ನಿಧನ

Suddi Udaya
error: Content is protected !!