September 6, 2026
ತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಗೇರುಕಟ್ಟೆ : ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ
ಭಜನಾ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ ಆ.17ರಂದು ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.

ಮಧ್ಯಾಹ್ನ ಮಹಿಳೆಯರಿಂದ ಭಜನಾ ಕಾರ್ಯಕ್ರಮ ಮಹಾಪೂಜೆ, ಪ್ರಸಾದ ವಿತರಣೆ, ನಂತರ 3 ರಿಂದ 6 ವರ್ಷದ ಮಕ್ಕಳಿಗೆ ಶ್ರೀಕೃಷ್ಣ ಹಾಗೂ ರಾಧೆ ಸ್ಪರ್ಧೆ ಹಾಗೂ ಮಹಿಳೆಯರಿಂದ ಮಡಿಕೆ ಒಡೆಯುವ ಮತ್ತು ವಿವಿಧ ಸ್ಪರ್ಧೆಗಳು ಜರುಗಿತು.

ಈ ವೇಳೆ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿ ಅಧ್ಯಕ್ಷೆ ರೇವತಿ ನಾರಾಯಣ, ಕಾರ್ಯದರ್ಶಿ ರೇಖಾ ರಾಘವ ಎಚ್, ಕೋಶಾಧಿಕಾರಿ ಕಲಾ ಲಿಂಗಪ್ಪ ಶೆಟ್ಟಿಗಾರ್, ಶ್ರೀ ಕೃಷ್ಣ ಮಹಿಳಾ ಸೇವಾ ಟ್ರಸ್ಟಿನ ಅಧ್ಯಕ್ಷೆ ದೇವಕಿ, ಕಾರ್ಯದರ್ಶಿ ವಿಶಾಲಾಕ್ಷಿ ಕೆ.ಬಿ., ಕೋಶಾಧಿಕಾರಿ ಯಶವಂತಿ ಸತೀಶ್, ನಿರ್ದೇಶಕರಾದ ಜ್ಯೋತಿ ಮಧ್ವರಾಜ್, ಮೀನಾಕ್ಷಿ, ನವೀನ ರಮೇಶ, ಶಾಂತಿ ರತ್ನಾಕರ, ಮೋಹಿನಿ ಶ್ರೀಧರ, ಗುಲಾಬಿ ಕೊರಗಪ್ಪ, ರೇವತಿ ಪ್ರಭಾಕರ, ರೇವತಿ ನಾರಾಯಣ, ಸದಸ್ಯರಾದ ಸುಭಾಷಿಣಿ ಜನಾರ್ದನ ಗೌಡ ಕೆ., ವಸಂತಿ, ಅನಿತಾ ದಯಾನಂದ, ಭಜನಾ ಪರಿಷತ್ತು ಲಾಯಿಲ ವಲಯ ಅಧ್ಯಕ್ಷ ಜನಾರ್ದನ ಹಾಗೂ ಸ್ಥಳೀಯ ಸದಸ್ಯರು ಉಪಸ್ಥಿತರಿದ್ದರು.

ವಸಂತ ಮಜಲು , ಶೇಖರ ನಾಯ್ಕ, ರಾಜೇಶ್ ಪೆಂರ್ಬುಡ, ಯೋಗೀಶ್ ಕುಮಾರ್, ವಿಜಯ ಗೌಡ ಕೆ., ಯಶೋಧರ ಶೆಟ್ಟಿ ಕೆ.,ಪುರಂದರ ಜಿ., ನವೀನ್ ಗೌಡ, ಸದಾನಂದ ಶೆಟ್ಟಿ ವೈ., ರಾಘವ ಹೆಚ್., ಸತೀಶ್ ಭಂಡಾರಿ ಸಹಕರಿಸಿದರು.
ಅಂಚೆ ಇಲಾಖೆ ನಿವೃತ್ತ ವಿಠ್ಠಲ ಶೆಟ್ಟಿ ಉಪ್ಪಡ್ಕ ನಿರೂಪಿಸಿ, ಡಾಕಯ್ಯ ಗೌಡ ಹೀರ್ಯ ವಂದಿಸಿದರು.

Related posts

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya

ಎಂಡೋ ಪೀಡಿತ ಮಗುವಿನ ಚಿಕಿತ್ಸೆಗೆ ನೇರವಾದ ರಕ್ಷಾಸಮಿತಿ ಸದಸ್ಯ ಕರೀಮ್‌ ಗೇರುಕಟ್ಟೆ

Suddi Udaya

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!