25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಫ್‌ಎಸ್ಎಲ್ ವರದಿ ಬರುವವರೆಗೂ ಎಸ್‌ಐಟಿ ತನಿಖೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವ‌ರ್ ಎಫ್‌ಎಸ್‌ಎಲ್‌ ವರದಿ ಬರುವ ತನಕ ಎಸ್‌ಐಟಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡಿದ ಅವರು, “ದೂರುದಾರ ನನಗೆ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾನೆ. ಕೊಲೆಯಾದ ಅನೇಕ ಯುವತಿ, ಮಹಿಳೆ ಹಾಗೂ ಪುರುಷರ ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿದ್ದಾನೆ.

ಈ ಬಗ್ಗೆ ರಾಜ್ಯದ ಮಹಿಳೆ ಆಯೋಗದ ಅಧ್ಯಕ್ಷರು ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆಯುತ್ತಾರೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸಲಾಗಿತ್ತು. ಎಸ್‌ಐಟಿ ಪ್ರಣಬ್‌ ಮೊಹಂತಿ ಅವರ ನೇತೃತ್ವದಲ್ಲಿ ಅನುಚೇತ್ ಅವರು ಸೇರಿ ತನಿಖೆ ನಡೆಸಿದ್ದಾರೆ. ಸಾಕ್ಷಿದಾರನಿಂದ 161 ಸ್ಟೇಟ್‌ಮೆಂಟ್ ತೆಗೆದುಕೊಂಡು, ಸ್ಥಳಗಳ ಮ್ಯಾಪ್ ಮಾಡಿಕೊಂಡು ಭೂ ಅಗೆತ ಪ್ರಾರಂಭಿಸಿದ್ದಾರೆ. ಭೂಮಿ ಅಗೆಯುವ ಸ್ಥಳ ಪ್ರಾರಂಭ ಮಾಡಿದಾಗ ಎರಡು ಸ್ಥಳಗಳಲ್ಲಿ ಅಸ್ಥಿ ಪಂಜರ ಸಿಕ್ಕಿದೆ. ಆ ಅಸ್ಥಿಪಂಜರವನ್ನು ಹಾಗೂ ಆ ಸ್ಥಳದಲ್ಲಿ ಸಿಕ್ಕ ಕೆಲವು ವಸ್ತುಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ.

ಎಫ್‌ಎಸ್‌ಎಲ್ ವರದಿ ಬರುವ ತನಕ ಎಸ್‌ಐಟಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು.ದೂರುದಾರನನ್ನು ಬಂಧಿಸಲು ಸಾಧ್ಯವಿಲ್ಲ:”ಸಾಕ್ಷಿ – ದೂರುದಾರ ಯಾರದೋ ಕಸ್ಟಡಿಯಲ್ಲಿ ಇರುತ್ತಾನೆ. ಏಕೆ ಬಂಧನ ಮಾಡಿಲ್ಲ?’ ಎಂಬ ಪ್ರಶ್ನೆ ಇದೆ. ಆದರೆ ಸಾಕ್ಷಿದಾರರಿಗೆ ಸುರಕ್ಷತೆ ಕೊಡುವ ನಿಟ್ಟಿನಲ್ಲಿ ಕಾಯ್ದೆ ಇದೆ. ಕೇಂದ್ರ ಸರ್ಕಾರದ ಕಾಯ್ದೆ ಅದು. ರಾಜ್ಯ ಸರ್ಕಾರವೂ ಅದನ್ನು ಅಳವಡಿಸಿಕೊಂಡಿದೆ. ಅದನ್ನು ಪಾಲನೆ ಮಾಡುತ್ತಿದ್ದೇವೆ. ಈ ಕಾರಣಕ್ಕೆ ಪೊಲೀಸ್‌ ಭದ್ರತೆಯಲ್ಲಿ ಇಡಲು ಸಾಧ್ಯವಿಲ್ಲ” ಎಂದು ತಿಳಿಸಿದರು.

Related posts

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ವೇಣೂರು: ದಿ. ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ

Suddi Udaya

ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya

ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದಿಂದ ಗುಣಮಟ್ಟ ಪರಿವೀಕ್ಷಣೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!