22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಪ್ರಕರಣದಲ್ಲಿ ಸರಕಾರ ತುರ್ತು ನಿರ್ಧಾರ ಮಾಡಿದೆ : ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು: ಶಾಸಕ ಕಿಶೋರ್ ಕುಮಾರ್ ಪುತ್ತೂರು

ಬೆಂಗಳೂರು: ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನ ಪರಿಷತ್ತಿನ ಶೂನ್ಯವೇಳೆಯಲ್ಲಿ ಮಾತನಾಡಿ, ಧರ್ಮಸ್ಥಳ ಗ್ರಾಮದಲ್ಲಿ “ಶವವನ್ನು ಹೂತಿದ್ದೇನೆ” ಎಂದು ಹೇಳಿಕೊಂಡ ವ್ಯಕ್ತಿಯ ಮಂಪರು (ಬ್ರೈನ್‌ ಮ್ಯಾಪಿಂಗ್) ಪರೀಕ್ಷೆ ನಡೆಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.

ಅನಾಮಿಕ ವ್ಯಕ್ತಿಯೋರ್ವ ಬುರುಡೆ ಹಿಡಿದುಕೊಂಡು “ನಾನು ಧರ್ಮಸ್ಥಳದಲ್ಲಿ 13 ಕಡೆ ನೂರಾರು ಮಹಿಳೆಯರು ಮತ್ತು ಬಾಲಕಿಯರ ಶವವನ್ನು ಹೂತಿದ್ದೇನೆ” ಎಂದು ಹೇಳಿದ ಘಟನೆಗೆ ಸಂಬಂಧಿಸಿದಂತೆ, ಮಂಗಳೂರಿನ ಪೊಲೀಸ್ ಅಧೀಕ್ಷಕರು ಮಂಪರು ಪರೀಕ್ಷೆ ಮಾಡಬೇಕೆಂದು ಮೊದಲು ನಿರ್ಧರಿಸಿದ್ದರು ಎಂಬುದು ಮಾಧ್ಯಮ ವರದಿಗಳಲ್ಲಿ ತಿಳಿದುಬಂದಿತ್ತು. ಆದರೆ, “ಮುಖ್ಯಮಂತ್ರಿಗಳು ಎಡಪಂಥೀಯ ಹಿಂದೂ ವಿರೋಧಿ ಗುಂಪುಗಳ ಒತ್ತಡಕ್ಕೆ ಜಗ್ಗಿ, ಈ ಪ್ರಕರಣವನ್ನು SIT ಗೆ ವಹಿಸುವ ತರಾತುರಿ ನಿರ್ಧಾರ ಕೈಗೊಂಡಿದ್ದಾರೆ” ಎಂದು ಶಾಸಕ ಟೀಕಿಸಿದರು.

ಅವರು ಮುಂದುವರಿದು, “ಶ್ರೀ ಕ್ಷೇತ್ರ ಧರ್ಮಸ್ಥಳವು ಕೋಟಿ ಕೋಟಿ ಭಕ್ತರ ನಂಬಿಕೆಯ ಪುಣ್ಯ ಕ್ಷೇತ್ರ. ಇಂತಹ ವಿಷಯಗಳನ್ನು ಸರಕಾರವು ಗಂಭೀರವಾಗಿ ಪರಿಗಣಿಸಿ, ಸುಳ್ಳು ದೂರು ನೀಡಿದ ವ್ಯಕ್ತಿ ಮತ್ತು ಅವರ ಹಿಂದೆ ನಿಂತಿರುವ ಶಕ್ತಿಗಳ ವಿರುದ್ಧ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

Related posts

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ಅತಿಥಿ ಉಪನ್ಯಾಸ: ಸೃಷ್ಟಿಕರ್ತ ಆರ್ಥಿಕತೆ ಮತ್ತು ಕೃತಕ ಬುದ್ಧಿಮತ್ತೆ ಕುರಿತು ಚರ್ಚೆ

Suddi Udaya

ಕೊಕ್ಕಡ: ಹಳ್ಳಿಂಗೇರಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya

ಲಾಯಿಲ ಶಿವ ದುರ್ಗಾ ಟೈಗರ್ಸ್ ವತಿಯಿಂದ 5ನೇ ವರ್ಷದ ಪಿಲಿ ನಲಿಕೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಬೆಂದ್ರಾಳ ಸೈಂಟ್ ಸಾವಿಯೋ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!