26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ನೂರಾ ಗೋಲ್ಡ್ ನಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಡ್ರಾಯಿಂಗ್ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ಬೆಳ್ತಂಗಡಿ: ಚಿನ್ನ, ಬೆಳ್ಳಿ ಮತ್ತು ವಜ್ರಾಭರಣಗಳ ಮಾರಾಟದಲ್ಲಿ ಜನಪ್ರಿಯಗೊಂಡಿರುವ ನೂರಾ ಗೋಲ್ಡ್ ಬೆಳ್ತಂಗಡಿ ಇಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಆಭರಣಗಳ ಡಿಸೈನ್‌ನ ಚಿತ್ರ ಬರೆಯುವ ಸ್ಪರ್ಧೆ ಹಮ್ಮಿಕೊಂಡು ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.

ಸಂಸ್ಥೆಯ ಕಾರ್ಯನಿರ್ವಾಹಕ ಕೆ ಎಸ್ ಮುಸ್ತಫಾ ಕಕ್ಕಿಂಜೆ ಅವರ ನೇತೃತ್ವದಲ್ಲಿ ಜರಗಿದ ಸಮಾರಂಭದಲ್ಲಿ ಅತಿಥಿಗಳನ್ನು ಸಿಬ್ಬಂದಿಗಳು ಸ್ವಾಗತಿಸಿದರು. ಸಿದ್ದೀಕ್, ನಝೀರ್ ಹಾಗೂ ಸಿಬ್ಬಂದಿಗಳು ಜೊತೆಗಿದ್ದರು.

ಸ್ಪರ್ಧೆಯಲ್ಲಿ ತಾಲೂಕಿನ ಏಳ್ನೂರಕ್ಕೂ‌ ಹೆಚ್ಚು ಚಿತ್ರಗಳು ಬಂದಿದ್ದು ಪ್ರಬುದ್ಧ ತೀರ್ಪುಗಾರರ ಮೂಲಕ ವಿಜೇತರನ್ನು ಆಯ್ಕೆ ಮಾಡಲಾಯಿತು.
ಸ್ಪರ್ಧಾ ವಿಜೇತರಾದ ಸಹಲಾ ಫಾತಿಮಾ, ಫಾತಿಮಾ ರಫಾಹ್, ಬೃಂದಾ ಎಸ್, ಗೌತಮ್, ಇನಾಯಾ ರಮ್ಲತ್ ಇವರು ಬಹುಮಾನ ತಮ್ಮದಾಗಿಸಿಕೊಂಡರು. ಫಯಾಝ್ ಧನ್ಯವಾದ ಅರ್ಪಿಸಿದರು.


ನೂರಾ ಗೋಲ್ಡ್ ನಲ್ಲಿ ಅತ್ಯಾಧುನಿಕ ಶೈಲಿಯ ಆಭರಣಗಳು, ಏಂಟಿಕ್ ಮತ್ತು ಸೆಮಿ ಆಂಟಿಕ್ ಆಭರಣಗಳು, ಡೈಮಂಡ್ ಗಳ ಆಭರಣಗಳ ಅಪೂರ್ವ ಸಂಗ್ರಹವಿದ್ದು ಗ್ರಾಹಕರ ಮನಸಿಗೆ ಒಪ್ಪುವ ಡಿಸೈನ್ ಮಾಡಿಕೊಡುವ ವ್ಯವಸ್ಥೆಯೂ ಇದೆ. ಗ್ರಾಹಕರ ಸೇವೆಯೇ ನಮ್ಮ ಪ್ರಥಮ ಆದ್ಯತೆ ಎಂದು ನಿರ್ವಾಹಕ ಮುಸ್ತಫ ಕಕ್ಕಿಂಜೆ ತಿಳಿಸಿದರು.

Related posts

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸುರೇಂದ್ರ ಪೈ ನಿಧನ

Suddi Udaya

ಉಜಿರೆ ಗ್ರಾ.ಪಂ.ನಲ್ಲಿ ಇಂಧನ ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆ ಶೇ 90.58 ಫಲಿತಾಂಶ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya
error: Content is protected !!