September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಸಮಾರೋಪ ಸಮಾರಂಭ

ಬೆಳಾಲು : ಮೈತ್ರಿ ಯುವಕ ಮಂಡಲ ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಕೃಷ್ಣವೇಷ, ಆಟೋಟ ಸ್ಪರ್ಧೆಯ ಸಮಾರೋಪ ಸಮಾರಂಭ ಆ.17 ರಂದು ಸಂಘದ ವಠಾರದಲ್ಲಿ ನೆರವೇರಿತು.

ಉಪನ್ಯಾಸಕಿ ಡಾ. ಶೀಲಾವತಿಯವರು ಧಾರ್ಮಿಕ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಬೌತಿಸ್ ಡಿ’ಸೋಜ ಬೆಳಾಲು, ಬೆಳಾಲು ಹಾಲು ಉತ್ಪಾದಕರ ಸಂಘ ಕಾರ್ಯದರ್ಶಿ ಸುಕೇಶ್ ಭಾಗವಹಿಸಿದ್ದರು, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹಾಂತೇಶ್ ಚೌಹಾನ್, ಜೇಸ್ಸಿ ಡಿ’ಸೋಜ, ಪದ್ಮಾವತಿ ಬನoದೂರು, ಕು. ಮನಶ್ರೀ ಇವರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿ ಮೈತ್ರಿ ಯುವಕ ಮಂಡಲ ಅಧ್ಯಕ್ಷ ನಿತಿನ್ ಮೋನಿಸ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ರಾಜೇಶ್ ಪಾರಳ, ಕಾರ್ಯದರ್ಶಿ ವಿಘ್ನೇಶ್ ಅನಂತೋಡಿ, ಪದಾಧಿಕಾರಿಗಳು ಉಪಸ್ಥಿತರಿದ್ದರು. ರಾಜೇಶ್ ಪಾರಳ ಸ್ವಾಗತಿಸಿ, ಸಂಘದ ಸಲಹೆಗಾರರು ನೋಟರಿ ವಕೀಲರಾದ ಶ್ರೀನಿವಾಸ ಗೌಡ ಕಾರ್ಯಕ್ರಮ ನಿರೂಪಿಸಿ, ಸಾತ್ವಿಕ್ ಸನ್ಮಾನ ಪತ್ರ ವಾಚಿಸಿದರು. ಕಿರಣ್ ಈರೆoತ್ಯಾರ್ ಬಹುಮಾನ ವಿಜೇತ ಪಟ್ಟಿ ವಾಚಿಸಿದರು. ಅಸೀಫ್ ಮುಂಡೆತ್ಯಾರು ಧನ್ಯವಾದವಿತ್ತರು. ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ನಡೆಯಿತು.

Related posts

ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕುತ್ಲೂರು: ಮಂಜುಶ್ರೀ ಭಜನಾ ಮಂಡಳಿಯಿಂದ 29ನೇ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಮೇಳದ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

Suddi Udaya

ಬಜಿಲ ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ, ಪೋಷಕರಿಂದ ಮಾದರಿ ಶಾಲಾ ಕೈತೋಟ ನಿರ್ಮಾಣ

Suddi Udaya

ಬೆಳಾಲು: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

Suddi Udaya
error: Content is protected !!