23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಿಯೋ ಕ್ಲಬ್ ನ ಪದಗ್ರಹಣ ಸಮಾರಂಭ

ಬೆಳ್ತಂಗಡಿ : ಲಿಯೋ ಕ್ಲಬ್ ಬೆಳ್ತಂಗಡಿ ಇದರ ಪದಗ್ರಹಣ ಸಮಾರಂಭವು ಬಲಿಪ ರೆಸಾರ್ಟ್ ನಡದಲ್ಲಿ ಜರುಗಿತು.

ಪದಗ್ರಹಣ ಅಧಿಕಾರಿಯಾಗಿ ಆಗಮಿಸಿದ ಲಿಯೋ ಲಯನ್ ಡಾ. ರಂಜಿತಾ ಶೆಟ್ಟಿ ಯವರು ನೂತನ ತಂಡದ ಪದಗ್ರಹಣವನ್ನು ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಲಿಯೋ ಅಧ್ಯಕ್ಷೆ ಲಿಯೋ ಶ್ರೀನಿಧಿ ಶೆಟ್ಟಿಯವರು ಹೊಸದಾಗಿ ಸೇರ್ಪಡೆಗೊಂಡ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಪ್ರಾಂತ್ಯಾಧ್ಯಕ್ಷ ಲಯನ್ ಜಗದೀಶ್ಚಂದ್ರ ಭಾಗವಹಿಸಿದರು. ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಮುರಳಿ ಬಲಿಪ, ಕಾರ್ಯದರ್ಶಿ ಲಯನ್ ಅಮಿತಾನಂದ ಹೆಗ್ಡೆ, ಕೋಶಾಧಿಕಾರಿ ಲಯನ್ ಸುಭಾಷಿನಿ, ಲಿಯೋ ಕ್ಲಬ್ ನ ಮಾರ್ಗದರ್ಶಕ ಲಯನ್ ಕೃಷ್ಣ ಕೆ ಆಚಾರ್ಯ, ಲಯನ್ ಡಾ.ದೇವಿ ಪ್ರಸಾದ್ ಬೊಲ್ಮಾ, ಕಳೆದ ಸಾಲಿನ ಕೋಶಾಧಿಕಾರಿ ಲಿಯೊ ಅಭಿಜ್ಞಾ ಬೊಲ್ಮಾ, ಪ್ರಸ್ತುತ ಸಾಲಿನ ಲಿಯೋ ಕ್ಲಬ್ ನ ಅಧ್ಯಕ್ಷೆ ಲಿಯೋ ಭಾಷಿಣಿ, ಕೋಶಾಧಿಕಾರಿ ಲಿಯೋ ಗ್ಲೆನ್ ಮೋನಿಸ್ ಉಪಸ್ಥಿತರಿದ್ದರು.

ನಿಕಟ ಪೂರ್ವ ಅಧ್ಯಕ್ಷ ಲಿಯೊ ಅಪ್ಸರ ಗೌಡ ಸ್ವಾಗತಿಸಿದರು. ಕಾರ್ಯದರ್ಶಿ ಲಿಯೋ ದೀಕ್ಷಿತ್ ಧನ್ಯವಾದ ನೀಡಿದರು.

Related posts

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

Suddi Udaya

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

Suddi Udaya

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya
error: Content is protected !!