22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

ಸುಲ್ಕೇರಿ: ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿ ಬ್ರಹ್ಮಗಿರಿ ಸುಲ್ಕೇರಿ ಇವರ ನೇತೃತ್ವದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು.

ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಗೌರವಾಧ್ಯಕ್ಷ ಸುಧೀರ್ ಎಸ್ .ಪಿ ರವರು ದೀಪಪ್ರಜ್ವಲನೆ ಮಾಡುವುದರ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ, ಆಟಿ ತಿಂಗಳಲ್ಲಿ ನಮ್ಮ ಹಿರಿಯರು ಆಚರಿಸಿಕೊಂಡು ಬಂದ ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕು ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಕ್ಷಗಾನ ಮಂಡಳಿಯ ಸಂಚಾಲಕ ನಿತ್ಯಾನಂದ ನಾವರ ಮಾತಾಡಿ ನಮ್ಮ ಹಿರಿಯರು ಆಟಿ ತಿಂಗಳಲ್ಲಿ ಯಾವ ಬಗೆಯ ತಿಂಡಿಗಳನ್ನು ಸೇವಿಸುತ್ತಿದ್ದರು, ಅನ್ನುವುದನ್ನು ಈ ಕಾರ್ಯಕ್ರಮದ ಮುಖಾಂತರ ಯುವಪೀಳಿಗೆಗೆ ಪರಿಚಯಿಸಲಾಯಿತು ಹಾಗೂ ನಮ್ಮಲ್ಲಿ ಯಾವುದೇ ರೀತಿಯ ಕೀಳರಿಮೆ ಇಲ್ಲದೆ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಅಧ್ಯಕ್ಷ ವಸಂತ ಪೂಜಾರಿಯವರು, ನಿಮ್ಮೆಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿದೆ ಮುಂದಕ್ಕೂ ನಿಮ್ಮೆಲ್ಲರ ಸಹಕಾರ ಇದೆ ರೀತಿ ಇರಲಿ ಎಂದು ಆಶಿಸಿದರು. ಒಟ್ಟು 32 ಬಗೆಯ ತಿಂಡಿ ಎಲ್ಲಾರ ಗಮನ ಸೆಳೆಯಿತು. ಮಕ್ಕಳು ಹಾಗೂ ಸಮಿತಿಯ ಸದಸ್ಯರಿಂದ ವಿವಿಧ ರೀತಿಯ ಮನರಂಜನಾ ಕಾರ್ಯಕ್ರಮವು ನಡೆಯಿತು.

ಈ ಸಂಧರ್ಭದಲ್ಲಿ ಸಾವ್ಯ ಗ್ರಾಮದ ಉದ್ಯಮಿಯಾದ ದಿನೇಶ್ ಕೋಟ್ಯಾನ್, ನಾರಾವಿಯ ಪ್ರಾಥಮಿಕ ಕೃಷಿಪತ್ತಿನ ಬ್ಯಾಂಕ್ ನ ನಿರ್ದೇಶಕರಾದ ಶ್ರೀಮತಿ ಯಶೋಧ ನಿತ್ಯಾನಂದ, ಸುಲ್ಕೇರಿಯ ಮಹಿಳಾ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷೆ ಶ್ರೀಮತಿ ಪ್ರೇಮ ಲೋಕಯ್ಯ ಪೂಜಾರಿ, ಸುಲ್ಕೇರಿ ಗ್ರಾಮ ಪಂಚಾಯತಿನ ಸದಸ್ಯರಾದ ನಾರಾಯಣ ಪೂಜಾರಿ ಪರಾರಿ, ಸಮಿತಿಯ ನಿಕಟಪೂರ್ವ ಅಧ್ಯಕ್ಷ ಕೊರಗಪ್ಪ ಪೂಜಾರಿ, ಬರ್ಕೆಮನೆತನದ ಗುರಿಕಾರರಾದ ನಾರಾಯಣ ಪೂಜಾರಿ, ರಾಜು ಪೂಜಾರಿ, ಸುದೀಪ್ ಪೂಜಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಲ್ಕೇರಿ ಒಕ್ಕೂಟದ ಅಧ್ಯಕ್ಷರಾದ ಯಶೋಧರ ಪೂಜಾರಿ ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

ಶ್ರೀಮತಿ ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು, ನಿಕಟಪೂರ್ವ ಕಾರ್ಯದರ್ಶಿ ಡೀಕಯ್ಯ ಪೂಜಾರಿ ಸ್ವಾಗತಿಸಿ, ವಸಂತಿ ಧನ್ಯವಾದವಿತ್ತರು

Related posts

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

Suddi Udaya

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ನಾವೂರುನಲ್ಲಿ ಆಧಾರ್‌ ಕಾರ್ಡ್ ನೋಂದಾವಣೆ ಶಿಬಿರ

Suddi Udaya

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

Suddi Udaya

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya
error: Content is protected !!