22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

ಅರಸಿನಮಕ್ಕಿ : ಪ್ರತಿಯೊಬ್ಬರೂ ನಾನು, ನನ್ನ ಕುಟುಂಬ, ನನ್ನ ಮನೆ ಎಂದು ಸಂಕುಚಿತವಾಗಿ ಯೋಚಿಸಿದರೆ ನಮ್ಮ ನೆಲದ ಸಂಸ್ಕೃತಿ, ಪರಂಪರೆ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಮುಂದಿನ ತಲೆಮಾರಿಗೆ ದಾಟಿಸುವುದು ಸಾಧ್ಯವಾಗದು. ಈ ನೆಲದ ಶ್ರೇಷ್ಠತೆಯನ್ನು ಪರಿಚಯಿಸುವ ಮೂಲಕ ಚೈತನ್ಯಮಿತ್ರ ಕಲಾವೃಂದ ಸಂಘಟನೆ ದೇಶ ಕಟ್ಟುವ ಕೆಲಸ ಮಾಡುತ್ತಿದೆ ಎಂದು ಸಂಸ್ಕಾರ ಭಾರತಿಯ ತಾಲೂಕು ಅಧ್ಯಕ್ಷ ಸಂಪತ್ ಸುವರ್ಣ ಮೆಚ್ಚುಗೆ ವ್ಯಕ್ತಪಡಿಸಿದರು.

ಅವರು ಅರಸಿನಮಕ್ಕಿಯಲ್ಲಿ ನಡೆದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ಸಂದೇಶವನ್ನು ನೀಡಿದರು. ಭಗವದ್ಗೀತೆಯಲ್ಲಿರುವ ಶ್ರೀಕೃಷ್ಣನ ಸಂದೇಶವು ಬದುಕಿಗೆ ದಾರಿದೀಪ. ಗೀತೆಯ ವಿಚಾರಧಾರೆಗಳನ್ನು ಶಾಲಾ ಪಠ್ಯದಲ್ಲಿ ಅಳವಡಿಸುವ ಕೆಲಸವಾಗಬೇಕು ಎಂದು ಅಭಿಪ್ರಾಯಪಟ್ಟರು.
ಕಾಪು ಉಪ್ಪರಡ್ಕ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಧರ್ಣಪ್ಪ ಗೌಡರು ಎಲ್ಲರನ್ನೂ ಒಗ್ಗೂಡಿಸಿ ಉತ್ಸವ ನಡೆಸುವ ಸಂಘಟನೆಯ ಕೆಲಸವನ್ನು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಸಾಧಕರಾದ ಯುವ ಕಲಾವಿದ ಸಂತೋಷ್ ಗೋಖಲೆ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿ ಶೈಕ್ಷಣಿಕ ಸಾಧನೆ ಮಾಡಿದ ಸುಚಿತ್ರ, ಸುಮಾರವರನ್ನು ಮತ್ತು ಎಸ್ಸೆಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿಜೇತ್ ಶೆಟ್ಟಿಯವರ ಪರವಾಗಿ ಅವರ ತಾಯಿ ಸುಂದರಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.


ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮುದ್ದು ಕೃಷ್ಣ ವೇಷ ಪ್ರದರ್ಶಿಸಿದ ಚಿಣ್ಣರಿಗೆ ಪ್ರೋತ್ಸಾಹಕ ಬಹುಮಾನ ನೀಡಲಾಯಿತು.
ಚೈತನ್ಯಮಿತ್ರ ಸಂಘಟನೆಯ ಅಧ್ಯಕ್ಷ ಗಣೇಶ್ ಹೊಸ್ತೋಟ ಅಧ್ಯಕ್ಷತೆ ವಹಿಸಿ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ತಿಳಿಸಿದರು.


ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್. ಉಪಸ್ಥಿತರಿದ್ದರು.
ಧನಿಕ್ಷಾ ಪ್ರಾರ್ಥಿಸಿದರು. ಶಶೀಂದ್ರ ಆಚಾರ್ಯ ಸ್ವಾಗತಿಸಿ ವೃಷಾಂಕ್ ಖಾಡಿಲ್ಕರ್ ಕಾರ್ಯಕ್ರಮ ನಿರೂಪಿಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಮೊದಲಾದವರು ಭೇಟಿ ನೀಡಿ ಶುಭಹಾರೈಸಿದರು. ಸಂಘಟನೆಯ ಪದಾಧಿಕಾರಿಗಳಾದ ಮುರಳೀಧರ ಶೆಟ್ಟಿಗಾರ್, ಅಭಿನಯ ಭಟ್, ನವೀನ್ ರೈ, ಗಣೇಶ್ ಪಲಸ್ತಡ್ಕ, ಶಿವರಾಮ ಗೌಡ, ಶ್ರೀಕಾಂತ್ ಕಾಂತ್ರೆಲ್, ಚಂದ್ರಶೇಖರ ಗೌಡ, ದಯಾನಂದ ಗೌಡ, ಶಶಿಕಾಂತ್ ಶೆಟ್ಟಿಗಾರ್, ಕೃಷ್ಣಪ್ಪ ಗೌಡ, ರವೀಂದ್ರ ಆಚಾರ್ಯ, ಹರ್ಷ ಕುಮಾರ್, ಸುದರ್ಶನ್ ಗೌಡ, ಜಯಪ್ರಸಾದ್ ಶೆಟ್ಟಿಗಾರ್, ಧನ್ಯ ಗಣೇಶ್, ನೀತಾ ರಾಧೇಶ್, ಭಾರತಿ, ಸರೋಜಿನಿ ನಾಯ್ಕ್, ಧನ್ಯ ಶೆಟ್ಟಿಗಾರ್, ಸಂದೀಪ್, ಧನ್ಯರಾಜ್ ಮೊದಲಾದವರು ಸಹಕರಿಸಿದರು.

Related posts

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

Suddi Udaya

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

Suddi Udaya

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮೂರನೇ ಶನಿವಾರ ಬ್ಯಾಗ್ ರಹಿತ ದಿನ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ ಸೀತಾರಾಮ ತೋಳ್ಪಾಡಿತ್ತಾರವರಿಗೆ ಅಭಿನಂದನಾ ಸಮಾರಂಭ

Suddi Udaya

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯ ಅಮೋಘ ಸಾಧನೆ: ಧಾರವಾಡ ಐಐಟಿಯಲ್ಲಿ ಪ್ರವೇಶಾತಿ ಗಿಟ್ಟಿಸಿಕೊಂಡ ಬೆಳ್ತಂಗಡಿಯ ಅಚಿಂತ್ಯದಾಸ್

Suddi Udaya

ಗುಡ್ಡ ಕುಸಿತದಂಥ ಪ್ರಕರಣ ಮತ್ತು ತಜ್ಞರ ಅಧ್ಯಯನ ವರದಿಗಳು ಭೂಕುಸಿತದ ಘೋರ ಪರಿಣಾಮಗಳನ್ನು ಜನರ ಮುಂದಿಟ್ಟಿದ್ದು ಯೋಜನೆಯನ್ನು ಮತ್ತೊಮ್ಮೆ ಪರಿಶೀಲಿಸುವಂತೆ ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ರವರಿಂದ ಸಭಾಪತಿಗಳಿಗೆ ಮನವಿ

Suddi Udaya
error: Content is protected !!