September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಕಿರಿಯಾಡಿಯಲ್ಲಿ ಶ್ರೀ ಬಾಲ ಗೋಕುಲಾಷ್ಟಮಿ ಆಚರಣೆ

ಉಜಿರೆ: ಶ್ರೀ ಸದಾಶಿವ ಬಾಲ ಗೋಕುಲ ಕೇಂದ್ರ ಕಿರಿಯಾಡಿ, ಮತ್ತು ಶ್ರೀ ಚಾಮುಂಡೇಶ್ವರಿ ಬಾಲಗೋಕುಲ ಕೇಂದ್ರ ಚಾಮುಂಡಿ ಬೆಟ್ಟ ಓಡಲ್ಲ ಇವುಗಳ ಜಂಟಿ ಆಶ್ರಯದಲ್ಲಿ, ಆ.15 ರಂದು ಕಿರಿಯಾಡಿ ದೇವಸ್ಥಾನದ ವಠಾರದಲ್ಲಿ ಪಾಲಕರ ಹಾಗೂ ಊರವರ ನೇತೃತ್ವದಲ್ಲಿ ಶ್ರೀ ಬಾಲ ಗೋಕಲಾಷ್ಟಮಿ ಕಾರ್ಯಕ್ರಮವು ಸಂಭ್ರಮ ಸಡಗರದಿಂದ ಜರುಗಿತು.

ನಿವೃತ್ತ ಶಿಕ್ಷಣ ಸಂಯೋಜನಾಧಿಕಾರಿ ಬಾ. ಬಾ. ಉಜಿರೆ ದೀಪ ಪ್ರಜ್ವಲನೆಯೊಂದಿಗೆ ಪ್ರಾರಂಭಗೊಂಡು, ನಿವೃತ್ತ ಸೈನ್ಯಧಿಕಾರಿಗಳಾದ ಹಾಗೂ ಪಾಲಕರಾದ ಜಯರಾಮ್ ಶೆಟ್ಟಿ ಕೆಮರ್ಜೆ ಹಾಗೂ ಸೂರಪ್ಪ ಗೌಡ ಕಿರಿಯಾಡಿ, ಇವರ ನೇತೃತ್ವದಲ್ಲಿ ಕೃಷ್ಣ ರಾಧೆ ವೇಷಗಳೊಂದಿಗೆ ಊರವರು ಜೊತೆಗೂಡಿ ಶಂಖ, ತಾಳ, ಜಾಗಟೆ ಕೃಷ್ಣನ ಘೋಷಣೆಗಳೊಂದಿಗೆ ಮೆರವಣಿಗೆ ಜರುಗಿತು.

35 ಕೃಷ್ಣ ರಾಧೆ ವೇಷಧಾರಿಗಳಿಂದ ವಿವಿಧ ನೃತ್ಯಗಳು, ಹಾಡು ಭಜನೆ ಕೃಷ್ಣನ ಘೋಷಣೆಗಳು ಗಣ್ಯರಿಂದ ಮೆಚ್ಚುಗೆ ಗಳಿಸಿದವು,

ಮುಖ್ಯ ಅತಿಥಿಗಳಾದ ಬಾಬಾ ಉಜಿರೆಯವರು ಶ್ರೀ ಕೃಷ್ಣನ ಬಾಲ್ಯ ಲೀಲೆಯ ಬಗ್ಗೆ ತಿಳಿಸಿದರು. ಗ್ರಾ.ಪಂ. ಸದಸ್ಯರಾದ ಶ್ರೀಮತಿ ಶಶಿಕಲಾ ದೇವಪ್ಪ ಗೌಡರವರು ಶುಭ ಹಾರೈಸಿದರು.
ತಾಲೂಕು ಗ್ರಾಮ ಸಮಿತಿ ಟೋಲಿ ಸದಸ್ಯೆ ಶ್ರೀಮತಿ ಭವ್ಯ ಮಾತಾಜಿಯವರು ಬಾಲ ಗೋಕುಲ ಕೇಂದ್ರದಲ್ಲಿ ನಡೆಯುತ್ತಿರುವ ಪ್ರಶಿಕ್ಷಣದ ಬಗ್ಗೆ ತಿಳಿಸಿದರು. ರಾಧಾಕೃಷ್ಣ ವೇಷಧಾರಿಗಳೊಂದಿಗೆ ಮಾತೆಯರು, ಪಾಲಕರು, ಮಾತಾಜಿಯವರು ಹಾಗೂ ಊರವರು ಪಾಲ್ಗೊಂಡರು .

ಉಜಿರೆ ಶಾರದಾ ಶೋರೂಮ್ ಮಾಲಕರು, ಹಾಗೂ ಉಜಿರೆ ಜೈನ ತರಕಾರಿ ಅಂಗಡಿಯವರು ಮತ್ತು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಶಶಿಕಲಾ ರವರು ಸಿಹಿ ತಿಂಡಿ ವಿತರಿಸಿದರು. ಪ್ರತಿ ಮನೆಯಿಂದ ಮಕ್ಕಳ ಜೊತೆ ಮಾತೆಯರು ಮುಷ್ಟಿ ಅವಲಕ್ಕಿ ಪ್ರಸಾದವನ್ನು ಕೃಷ್ಣದೇವರಿಗೆ ಸಮರ್ಪಿಸಿದರು.
ಶಿಕ್ಷಕಿ ಸೇವಂತಿ ನಿರಂಜನ್ ನಿರೂಪಿಸಿ, ರಾಜೇಶ್ವರಿ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತoಬಿಲ ಸೇವೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ರಥಸಪ್ತಮಿಯ ಪ್ರಯುಕ್ತ 108 ಸಾಮೂಹಿಕ ಸೂರ್ಯ ನಮಸ್ಕಾರ

Suddi Udaya
error: Content is protected !!