38.6 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಗೇರುಕಟ್ಟೆ : ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ
ಭಜನಾ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ ಆ.17ರಂದು ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.

ಮಧ್ಯಾಹ್ನ ಮಹಿಳೆಯರಿಂದ ಭಜನಾ ಕಾರ್ಯಕ್ರಮ ಮಹಾಪೂಜೆ, ಪ್ರಸಾದ ವಿತರಣೆ, ನಂತರ 3 ರಿಂದ 6 ವರ್ಷದ ಮಕ್ಕಳಿಗೆ ಶ್ರೀಕೃಷ್ಣ ಹಾಗೂ ರಾಧೆ ಸ್ಪರ್ಧೆ ಹಾಗೂ ಮಹಿಳೆಯರಿಂದ ಮಡಿಕೆ ಒಡೆಯುವ ಮತ್ತು ವಿವಿಧ ಸ್ಪರ್ಧೆಗಳು ಜರುಗಿತು.

ಈ ವೇಳೆ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿ ಅಧ್ಯಕ್ಷೆ ರೇವತಿ ನಾರಾಯಣ, ಕಾರ್ಯದರ್ಶಿ ರೇಖಾ ರಾಘವ ಎಚ್, ಕೋಶಾಧಿಕಾರಿ ಕಲಾ ಲಿಂಗಪ್ಪ ಶೆಟ್ಟಿಗಾರ್, ಶ್ರೀ ಕೃಷ್ಣ ಮಹಿಳಾ ಸೇವಾ ಟ್ರಸ್ಟಿನ ಅಧ್ಯಕ್ಷೆ ದೇವಕಿ, ಕಾರ್ಯದರ್ಶಿ ವಿಶಾಲಾಕ್ಷಿ ಕೆ.ಬಿ., ಕೋಶಾಧಿಕಾರಿ ಯಶವಂತಿ ಸತೀಶ್, ನಿರ್ದೇಶಕರಾದ ಜ್ಯೋತಿ ಮಧ್ವರಾಜ್, ಮೀನಾಕ್ಷಿ, ನವೀನ ರಮೇಶ, ಶಾಂತಿ ರತ್ನಾಕರ, ಮೋಹಿನಿ ಶ್ರೀಧರ, ಗುಲಾಬಿ ಕೊರಗಪ್ಪ, ರೇವತಿ ಪ್ರಭಾಕರ, ರೇವತಿ ನಾರಾಯಣ, ಸದಸ್ಯರಾದ ಸುಭಾಷಿಣಿ ಜನಾರ್ದನ ಗೌಡ ಕೆ., ವಸಂತಿ, ಅನಿತಾ ದಯಾನಂದ, ಭಜನಾ ಪರಿಷತ್ತು ಲಾಯಿಲ ವಲಯ ಅಧ್ಯಕ್ಷ ಜನಾರ್ದನ ಹಾಗೂ ಸ್ಥಳೀಯ ಸದಸ್ಯರು ಉಪಸ್ಥಿತರಿದ್ದರು.

ವಸಂತ ಮಜಲು , ಶೇಖರ ನಾಯ್ಕ, ರಾಜೇಶ್ ಪೆಂರ್ಬುಡ, ಯೋಗೀಶ್ ಕುಮಾರ್, ವಿಜಯ ಗೌಡ ಕೆ., ಯಶೋಧರ ಶೆಟ್ಟಿ ಕೆ.,ಪುರಂದರ ಜಿ., ನವೀನ್ ಗೌಡ, ಸದಾನಂದ ಶೆಟ್ಟಿ ವೈ., ರಾಘವ ಹೆಚ್., ಸತೀಶ್ ಭಂಡಾರಿ ಸಹಕರಿಸಿದರು.
ಅಂಚೆ ಇಲಾಖೆ ನಿವೃತ್ತ ವಿಠ್ಠಲ ಶೆಟ್ಟಿ ಉಪ್ಪಡ್ಕ ನಿರೂಪಿಸಿ, ಡಾಕಯ್ಯ ಗೌಡ ಹೀರ್ಯ ವಂದಿಸಿದರು.

Related posts

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

Suddi Udaya

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

Suddi Udaya

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya

ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿಗೆ ಡಿಸ್ಟಿಂಕಷನ್ ಗಳ ಮಹಾಪೂರ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya
error: Content is protected !!