25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಗೇರುಕಟ್ಟೆ : ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ
ಭಜನಾ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ ಆ.17ರಂದು ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.

ಮಧ್ಯಾಹ್ನ ಮಹಿಳೆಯರಿಂದ ಭಜನಾ ಕಾರ್ಯಕ್ರಮ ಮಹಾಪೂಜೆ, ಪ್ರಸಾದ ವಿತರಣೆ, ನಂತರ 3 ರಿಂದ 6 ವರ್ಷದ ಮಕ್ಕಳಿಗೆ ಶ್ರೀಕೃಷ್ಣ ಹಾಗೂ ರಾಧೆ ಸ್ಪರ್ಧೆ ಹಾಗೂ ಮಹಿಳೆಯರಿಂದ ಮಡಿಕೆ ಒಡೆಯುವ ಮತ್ತು ವಿವಿಧ ಸ್ಪರ್ಧೆಗಳು ಜರುಗಿತು.

ಈ ವೇಳೆ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿ ಅಧ್ಯಕ್ಷೆ ರೇವತಿ ನಾರಾಯಣ, ಕಾರ್ಯದರ್ಶಿ ರೇಖಾ ರಾಘವ ಎಚ್, ಕೋಶಾಧಿಕಾರಿ ಕಲಾ ಲಿಂಗಪ್ಪ ಶೆಟ್ಟಿಗಾರ್, ಶ್ರೀ ಕೃಷ್ಣ ಮಹಿಳಾ ಸೇವಾ ಟ್ರಸ್ಟಿನ ಅಧ್ಯಕ್ಷೆ ದೇವಕಿ, ಕಾರ್ಯದರ್ಶಿ ವಿಶಾಲಾಕ್ಷಿ ಕೆ.ಬಿ., ಕೋಶಾಧಿಕಾರಿ ಯಶವಂತಿ ಸತೀಶ್, ನಿರ್ದೇಶಕರಾದ ಜ್ಯೋತಿ ಮಧ್ವರಾಜ್, ಮೀನಾಕ್ಷಿ, ನವೀನ ರಮೇಶ, ಶಾಂತಿ ರತ್ನಾಕರ, ಮೋಹಿನಿ ಶ್ರೀಧರ, ಗುಲಾಬಿ ಕೊರಗಪ್ಪ, ರೇವತಿ ಪ್ರಭಾಕರ, ರೇವತಿ ನಾರಾಯಣ, ಸದಸ್ಯರಾದ ಸುಭಾಷಿಣಿ ಜನಾರ್ದನ ಗೌಡ ಕೆ., ವಸಂತಿ, ಅನಿತಾ ದಯಾನಂದ, ಭಜನಾ ಪರಿಷತ್ತು ಲಾಯಿಲ ವಲಯ ಅಧ್ಯಕ್ಷ ಜನಾರ್ದನ ಹಾಗೂ ಸ್ಥಳೀಯ ಸದಸ್ಯರು ಉಪಸ್ಥಿತರಿದ್ದರು.

ವಸಂತ ಮಜಲು , ಶೇಖರ ನಾಯ್ಕ, ರಾಜೇಶ್ ಪೆಂರ್ಬುಡ, ಯೋಗೀಶ್ ಕುಮಾರ್, ವಿಜಯ ಗೌಡ ಕೆ., ಯಶೋಧರ ಶೆಟ್ಟಿ ಕೆ.,ಪುರಂದರ ಜಿ., ನವೀನ್ ಗೌಡ, ಸದಾನಂದ ಶೆಟ್ಟಿ ವೈ., ರಾಘವ ಹೆಚ್., ಸತೀಶ್ ಭಂಡಾರಿ ಸಹಕರಿಸಿದರು.
ಅಂಚೆ ಇಲಾಖೆ ನಿವೃತ್ತ ವಿಠ್ಠಲ ಶೆಟ್ಟಿ ಉಪ್ಪಡ್ಕ ನಿರೂಪಿಸಿ, ಡಾಕಯ್ಯ ಗೌಡ ಹೀರ್ಯ ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಹರಿಣಿ ಎಸ್. ಭಟ್ ಗೆ 607 ಅಂಕ

Suddi Udaya

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

Suddi Udaya
error: Content is protected !!