22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಗೇರುಕಟ್ಟೆ : ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ
ಭಜನಾ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ ಆ.17ರಂದು ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.

ಮಧ್ಯಾಹ್ನ ಮಹಿಳೆಯರಿಂದ ಭಜನಾ ಕಾರ್ಯಕ್ರಮ ಮಹಾಪೂಜೆ, ಪ್ರಸಾದ ವಿತರಣೆ, ನಂತರ 3 ರಿಂದ 6 ವರ್ಷದ ಮಕ್ಕಳಿಗೆ ಶ್ರೀಕೃಷ್ಣ ಹಾಗೂ ರಾಧೆ ಸ್ಪರ್ಧೆ ಹಾಗೂ ಮಹಿಳೆಯರಿಂದ ಮಡಿಕೆ ಒಡೆಯುವ ಮತ್ತು ವಿವಿಧ ಸ್ಪರ್ಧೆಗಳು ಜರುಗಿತು.

ಈ ವೇಳೆ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿ ಅಧ್ಯಕ್ಷೆ ರೇವತಿ ನಾರಾಯಣ, ಕಾರ್ಯದರ್ಶಿ ರೇಖಾ ರಾಘವ ಎಚ್, ಕೋಶಾಧಿಕಾರಿ ಕಲಾ ಲಿಂಗಪ್ಪ ಶೆಟ್ಟಿಗಾರ್, ಶ್ರೀ ಕೃಷ್ಣ ಮಹಿಳಾ ಸೇವಾ ಟ್ರಸ್ಟಿನ ಅಧ್ಯಕ್ಷೆ ದೇವಕಿ, ಕಾರ್ಯದರ್ಶಿ ವಿಶಾಲಾಕ್ಷಿ ಕೆ.ಬಿ., ಕೋಶಾಧಿಕಾರಿ ಯಶವಂತಿ ಸತೀಶ್, ನಿರ್ದೇಶಕರಾದ ಜ್ಯೋತಿ ಮಧ್ವರಾಜ್, ಮೀನಾಕ್ಷಿ, ನವೀನ ರಮೇಶ, ಶಾಂತಿ ರತ್ನಾಕರ, ಮೋಹಿನಿ ಶ್ರೀಧರ, ಗುಲಾಬಿ ಕೊರಗಪ್ಪ, ರೇವತಿ ಪ್ರಭಾಕರ, ರೇವತಿ ನಾರಾಯಣ, ಸದಸ್ಯರಾದ ಸುಭಾಷಿಣಿ ಜನಾರ್ದನ ಗೌಡ ಕೆ., ವಸಂತಿ, ಅನಿತಾ ದಯಾನಂದ, ಭಜನಾ ಪರಿಷತ್ತು ಲಾಯಿಲ ವಲಯ ಅಧ್ಯಕ್ಷ ಜನಾರ್ದನ ಹಾಗೂ ಸ್ಥಳೀಯ ಸದಸ್ಯರು ಉಪಸ್ಥಿತರಿದ್ದರು.

ವಸಂತ ಮಜಲು , ಶೇಖರ ನಾಯ್ಕ, ರಾಜೇಶ್ ಪೆಂರ್ಬುಡ, ಯೋಗೀಶ್ ಕುಮಾರ್, ವಿಜಯ ಗೌಡ ಕೆ., ಯಶೋಧರ ಶೆಟ್ಟಿ ಕೆ.,ಪುರಂದರ ಜಿ., ನವೀನ್ ಗೌಡ, ಸದಾನಂದ ಶೆಟ್ಟಿ ವೈ., ರಾಘವ ಹೆಚ್., ಸತೀಶ್ ಭಂಡಾರಿ ಸಹಕರಿಸಿದರು.
ಅಂಚೆ ಇಲಾಖೆ ನಿವೃತ್ತ ವಿಠ್ಠಲ ಶೆಟ್ಟಿ ಉಪ್ಪಡ್ಕ ನಿರೂಪಿಸಿ, ಡಾಕಯ್ಯ ಗೌಡ ಹೀರ್ಯ ವಂದಿಸಿದರು.

Related posts

ಶಿಬಾಜೆ ಜನಸ್ಪಂದನ ಸಭೆ

Suddi Udaya

ಬಳ್ಳಮಂಜ ಬ್ರಹ್ಮಕಲಶ: ಈಶ್ವರ ದೇವರ ಲಿಂಗ ಪುನ:ಪ್ರತಿಷ್ಠೆ ಅಷ್ಟಬಂಧ ಪ್ರತಿಷ್ಠೆ-ಗರುಡ ಪ್ರದಕ್ಷಿಣೆ

Suddi Udaya

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!