25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ

ಚಾರ್ಮಾಡಿ : ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿಯಲ್ಲಿ ಆ.15 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಬೆಳಿಗ್ಗೆ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಉದ್ಘಾಟನೆಗೊಂಡು ಜಾರು ಕಂಬ ಮತ್ತು ವಿವಿಧ ಆಟೋಟ ಸ್ಪರ್ಧೆಗಳು ನಡೆದು ಸಂಜೆ ಸಮಾರೋಪ ಸಮಾರಂಭ ನಡೆಯಿತು.

ಸಮಾರೋಪ ಸಮಾರಂಭದಲ್ಲಿ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಮಾತನಾಡಿ ಯುವಕರು ಸಂಘಟನಾತ್ಮಕವಾಗಿ ಬೆಳೆದಾಗ ಸದೃಢ ಸಮಾಜ ಕಟ್ಟಲು ಸಾಧ್ಯ ಎಂದು ತಿಳಿಸಿದರು. ಧಾರ್ಮಿಕ ಭಾಷಣ ಮಾಡಿದ ಡಾ.ರವೀಶ್ ಪಡುಮಲೆ ಭಗವಾನ್ ಶ್ರೀ ಕೃಷ್ಣ ನೀಡಿದ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಸುಂದರ ಬದುಕು ಸಾಗಿಸಲು ಸಾಧ್ಯ ಮತ್ತು ಇತ್ತೀಚಿನ ದಿನಗಳಲ್ಲಿ ಧಾರ್ಮಿಕ ಶ್ರದ್ದಾ ಕೇಂದ್ರಗಳ ಮೇಲಿನ ದಾಳಿ ಹಿಂದೂ ಸಮಾಜ ಸದಾ ಖಂಡಿಸುತ್ತದೆ ಎಂಬ ಮಾತುಗಳನ್ನು ಹೇಳಿದರು.

ಧಾರ್ಮಿಕ ಸಭಾ ಕಾರ್ಯಕ್ರಮದ ಸಮಾರೋಪ ವೇದಿಕೆಯಲ್ಲಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಹೊಸಮಠ ಶ್ರೀ ಜನ್ಮಾಷ್ಠಮಿಯ ಅಧ್ಯಕ್ಷ ರಾಜೇಶ್ ಬಂಗ್ಲೆಗುಡ್ಡೆ ಉಪಸ್ಥಿತರಿದ್ದರು. ಗಣೇಶ್ ಕೋಟ್ಯಾನ್ ಸ್ವಾಗತಿಸಿ, ದಿವಿನೇಶ್ ಮೈಕಾನ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ವೇಣೂರು ಸೊಸೈಟಿಯ ಮಾಜಿ ನಿರ್ದೇಶಕ ರಾಜೇಂದ್ರ ರಾವ್ ನಿಧನ

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆ; ಮಾಸಿಕ ಸಭೆ

Suddi Udaya

ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ

Suddi Udaya

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

Suddi Udaya
error: Content is protected !!