July 23, 2026
ಅಪಘಾತಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಫ್‌ಎಸ್ಎಲ್ ವರದಿ ಬರುವವರೆಗೂ ಎಸ್‌ಐಟಿ ತನಿಖೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವ‌ರ್ ಎಫ್‌ಎಸ್‌ಎಲ್‌ ವರದಿ ಬರುವ ತನಕ ಎಸ್‌ಐಟಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡಿದ ಅವರು, “ದೂರುದಾರ ನನಗೆ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾನೆ. ಕೊಲೆಯಾದ ಅನೇಕ ಯುವತಿ, ಮಹಿಳೆ ಹಾಗೂ ಪುರುಷರ ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿದ್ದಾನೆ.

ಈ ಬಗ್ಗೆ ರಾಜ್ಯದ ಮಹಿಳೆ ಆಯೋಗದ ಅಧ್ಯಕ್ಷರು ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆಯುತ್ತಾರೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸಲಾಗಿತ್ತು. ಎಸ್‌ಐಟಿ ಪ್ರಣಬ್‌ ಮೊಹಂತಿ ಅವರ ನೇತೃತ್ವದಲ್ಲಿ ಅನುಚೇತ್ ಅವರು ಸೇರಿ ತನಿಖೆ ನಡೆಸಿದ್ದಾರೆ. ಸಾಕ್ಷಿದಾರನಿಂದ 161 ಸ್ಟೇಟ್‌ಮೆಂಟ್ ತೆಗೆದುಕೊಂಡು, ಸ್ಥಳಗಳ ಮ್ಯಾಪ್ ಮಾಡಿಕೊಂಡು ಭೂ ಅಗೆತ ಪ್ರಾರಂಭಿಸಿದ್ದಾರೆ. ಭೂಮಿ ಅಗೆಯುವ ಸ್ಥಳ ಪ್ರಾರಂಭ ಮಾಡಿದಾಗ ಎರಡು ಸ್ಥಳಗಳಲ್ಲಿ ಅಸ್ಥಿ ಪಂಜರ ಸಿಕ್ಕಿದೆ. ಆ ಅಸ್ಥಿಪಂಜರವನ್ನು ಹಾಗೂ ಆ ಸ್ಥಳದಲ್ಲಿ ಸಿಕ್ಕ ಕೆಲವು ವಸ್ತುಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ.

ಎಫ್‌ಎಸ್‌ಎಲ್ ವರದಿ ಬರುವ ತನಕ ಎಸ್‌ಐಟಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು.ದೂರುದಾರನನ್ನು ಬಂಧಿಸಲು ಸಾಧ್ಯವಿಲ್ಲ:”ಸಾಕ್ಷಿ – ದೂರುದಾರ ಯಾರದೋ ಕಸ್ಟಡಿಯಲ್ಲಿ ಇರುತ್ತಾನೆ. ಏಕೆ ಬಂಧನ ಮಾಡಿಲ್ಲ?’ ಎಂಬ ಪ್ರಶ್ನೆ ಇದೆ. ಆದರೆ ಸಾಕ್ಷಿದಾರರಿಗೆ ಸುರಕ್ಷತೆ ಕೊಡುವ ನಿಟ್ಟಿನಲ್ಲಿ ಕಾಯ್ದೆ ಇದೆ. ಕೇಂದ್ರ ಸರ್ಕಾರದ ಕಾಯ್ದೆ ಅದು. ರಾಜ್ಯ ಸರ್ಕಾರವೂ ಅದನ್ನು ಅಳವಡಿಸಿಕೊಂಡಿದೆ. ಅದನ್ನು ಪಾಲನೆ ಮಾಡುತ್ತಿದ್ದೇವೆ. ಈ ಕಾರಣಕ್ಕೆ ಪೊಲೀಸ್‌ ಭದ್ರತೆಯಲ್ಲಿ ಇಡಲು ಸಾಧ್ಯವಿಲ್ಲ” ಎಂದು ತಿಳಿಸಿದರು.

Related posts

ಮಂಗಳೂರು “ಎಂಪಿರಿಯಾ ಕಾರ್ಪೋರೇಶನ್” ಷೇರು ಮಾರುಕಟ್ಟೆಯ ಕೋಚಿಂಗ್ ಸೆಂಟರ್ ನ ಮಾಹಿತಿ ಕಾರ್ಯಾಗಾರ ಹಾಗೂ “ಗೋ ವರ್ಧನ ಗಿರಿ” ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಪೂರ್ವಸಭೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

Suddi Udaya

ಮಡಂತ್ಯಾರು ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜಲ ಮೂಲ ಶುಚಿತ್ವ ಹಾಗೂ ಹಣ್ಣು ಹಂಪಲು ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya

ಮೂಡುಕೋಡಿ: ಒಕ್ಕೂಟದ ಪದಗ್ರಹಣ ಸಮಾರಂಭ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!