23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಫ್‌ಎಸ್ಎಲ್ ವರದಿ ಬರುವವರೆಗೂ ಎಸ್‌ಐಟಿ ತನಿಖೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವ‌ರ್ ಎಫ್‌ಎಸ್‌ಎಲ್‌ ವರದಿ ಬರುವ ತನಕ ಎಸ್‌ಐಟಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡಿದ ಅವರು, “ದೂರುದಾರ ನನಗೆ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾನೆ. ಕೊಲೆಯಾದ ಅನೇಕ ಯುವತಿ, ಮಹಿಳೆ ಹಾಗೂ ಪುರುಷರ ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿದ್ದಾನೆ.

ಈ ಬಗ್ಗೆ ರಾಜ್ಯದ ಮಹಿಳೆ ಆಯೋಗದ ಅಧ್ಯಕ್ಷರು ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆಯುತ್ತಾರೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸಲಾಗಿತ್ತು. ಎಸ್‌ಐಟಿ ಪ್ರಣಬ್‌ ಮೊಹಂತಿ ಅವರ ನೇತೃತ್ವದಲ್ಲಿ ಅನುಚೇತ್ ಅವರು ಸೇರಿ ತನಿಖೆ ನಡೆಸಿದ್ದಾರೆ. ಸಾಕ್ಷಿದಾರನಿಂದ 161 ಸ್ಟೇಟ್‌ಮೆಂಟ್ ತೆಗೆದುಕೊಂಡು, ಸ್ಥಳಗಳ ಮ್ಯಾಪ್ ಮಾಡಿಕೊಂಡು ಭೂ ಅಗೆತ ಪ್ರಾರಂಭಿಸಿದ್ದಾರೆ. ಭೂಮಿ ಅಗೆಯುವ ಸ್ಥಳ ಪ್ರಾರಂಭ ಮಾಡಿದಾಗ ಎರಡು ಸ್ಥಳಗಳಲ್ಲಿ ಅಸ್ಥಿ ಪಂಜರ ಸಿಕ್ಕಿದೆ. ಆ ಅಸ್ಥಿಪಂಜರವನ್ನು ಹಾಗೂ ಆ ಸ್ಥಳದಲ್ಲಿ ಸಿಕ್ಕ ಕೆಲವು ವಸ್ತುಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ.

ಎಫ್‌ಎಸ್‌ಎಲ್ ವರದಿ ಬರುವ ತನಕ ಎಸ್‌ಐಟಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು.ದೂರುದಾರನನ್ನು ಬಂಧಿಸಲು ಸಾಧ್ಯವಿಲ್ಲ:”ಸಾಕ್ಷಿ – ದೂರುದಾರ ಯಾರದೋ ಕಸ್ಟಡಿಯಲ್ಲಿ ಇರುತ್ತಾನೆ. ಏಕೆ ಬಂಧನ ಮಾಡಿಲ್ಲ?’ ಎಂಬ ಪ್ರಶ್ನೆ ಇದೆ. ಆದರೆ ಸಾಕ್ಷಿದಾರರಿಗೆ ಸುರಕ್ಷತೆ ಕೊಡುವ ನಿಟ್ಟಿನಲ್ಲಿ ಕಾಯ್ದೆ ಇದೆ. ಕೇಂದ್ರ ಸರ್ಕಾರದ ಕಾಯ್ದೆ ಅದು. ರಾಜ್ಯ ಸರ್ಕಾರವೂ ಅದನ್ನು ಅಳವಡಿಸಿಕೊಂಡಿದೆ. ಅದನ್ನು ಪಾಲನೆ ಮಾಡುತ್ತಿದ್ದೇವೆ. ಈ ಕಾರಣಕ್ಕೆ ಪೊಲೀಸ್‌ ಭದ್ರತೆಯಲ್ಲಿ ಇಡಲು ಸಾಧ್ಯವಿಲ್ಲ” ಎಂದು ತಿಳಿಸಿದರು.

Related posts

ನ.19: ಬೆಳ್ತಂಗಡಿಯಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ದಿಗ್ವಿಜಯ ಬೆಳ್ತಂಗಡಿ ಬಿಜೆಪಿ ಕಾರ್ಯಕರ್ತರಿಂದ ಗೆಲುವಿನ ಸಂಭ್ರಮಾಚರಣೆ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya
error: Content is protected !!