23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

ಬೆಳ್ತಂಗಡಿ: 2012ರಲ್ಲಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ ಬೆಳಕಿಗೆ ಬಂದ 21 ದಿನಗಳ ಹಿಂದೆ ಧರ್ಮಸ್ಥಳದಲ್ಲಿ ಭೀಕರವಾಗಿ ನಡೆದ ಆನೆ ಮಾವುತ ನಾರಾಯಣ ಮತ್ತು ತಂಗಿ ಯಮುನಾ ಜೋಡಿ ಕೊಲೆ ಪ್ರಕರಣದ ತನಿಖೆಗೆ ಒತ್ತಾಯಿಸಿ ಆನೆ ಮಾವುತನ ಮಕ್ಕಳು ಸೋಮವಾರ ಎಸ್ ಐ ಟಿ ಠಾಣೆಗೆ ದೂರು ನೀಡಲು ಬಂದಿದ್ದು ಧರ್ಮಸ್ಥಳ ಠಾಣೆಗೆ ಮೊದಲು ದೂರು ನೀಡಿ ಬರುವಂತೆ ಎಸ್‌ ಐ ಟಿ ಅಧಿಕಾರಿಗಳು ತಿಳಿಸಿದ್ದಾರೆ.

ಎಸ್ ಐ ಟಿ ಕಚೇರಿಗೆ ಬಂದ ಗಣೇಶ ಮತ್ತು ಸಹೋದರಿ ಭಾರತಿ ಅವರು ನಾರಾಯಣ ಮತ್ತು ಅವರ ತಂಗಿ ಯಮುನಾ ಎಂಬವರು 2012ರ ಸೆ 21ರಂದು ರಾತ್ರಿ ಕೆ.ಎಸ್.ಆರ್.ಟಿ.ಸಿ.ಬಸ್ಸು ನಿಲ್ದಾಣದಲ್ಲಿ ಗಣೇಶೋತ್ಸವ ಪ್ರಯುಕ್ತ ನಡೆದ ನಾಟಕ ವೀಕ್ಷಿಸಿ ಸುಮಾರು ರಾತ್ರಿ 10ಗಂಟೆ ಹೊತ್ತಿಗೆ ತಮ್ಮ ಮನೆಗೆ ಬಂದಿದ್ದು ಅದೇ ರಾತ್ರಿ ನಿಗೂಢವಾಗಿ ಕೊಲೆ ನಡೆದಿದ್ದು ಇದೀಗ ಮೃತ ನಾರಾಯಣ ಅವರ ಮಕ್ಕಳು ಎಸ್ ಐ ಟಿಗೆ ದೂರು ನೀಡಲು ಬಂದಿದ್ದಾರೆ.

Related posts

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನೆ

Suddi Udaya

ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಪುರುಷರು

Suddi Udaya

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

Suddi Udaya

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya

ಲಯನ್ಸ್ ಸಂಸ್ಥೆ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!