24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಪ್ರಕರಣದಲ್ಲಿ ಸರಕಾರ ತುರ್ತು ನಿರ್ಧಾರ ಮಾಡಿದೆ : ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು: ಶಾಸಕ ಕಿಶೋರ್ ಕುಮಾರ್ ಪುತ್ತೂರು

ಬೆಂಗಳೂರು: ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನ ಪರಿಷತ್ತಿನ ಶೂನ್ಯವೇಳೆಯಲ್ಲಿ ಮಾತನಾಡಿ, ಧರ್ಮಸ್ಥಳ ಗ್ರಾಮದಲ್ಲಿ “ಶವವನ್ನು ಹೂತಿದ್ದೇನೆ” ಎಂದು ಹೇಳಿಕೊಂಡ ವ್ಯಕ್ತಿಯ ಮಂಪರು (ಬ್ರೈನ್‌ ಮ್ಯಾಪಿಂಗ್) ಪರೀಕ್ಷೆ ನಡೆಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.

ಅನಾಮಿಕ ವ್ಯಕ್ತಿಯೋರ್ವ ಬುರುಡೆ ಹಿಡಿದುಕೊಂಡು “ನಾನು ಧರ್ಮಸ್ಥಳದಲ್ಲಿ 13 ಕಡೆ ನೂರಾರು ಮಹಿಳೆಯರು ಮತ್ತು ಬಾಲಕಿಯರ ಶವವನ್ನು ಹೂತಿದ್ದೇನೆ” ಎಂದು ಹೇಳಿದ ಘಟನೆಗೆ ಸಂಬಂಧಿಸಿದಂತೆ, ಮಂಗಳೂರಿನ ಪೊಲೀಸ್ ಅಧೀಕ್ಷಕರು ಮಂಪರು ಪರೀಕ್ಷೆ ಮಾಡಬೇಕೆಂದು ಮೊದಲು ನಿರ್ಧರಿಸಿದ್ದರು ಎಂಬುದು ಮಾಧ್ಯಮ ವರದಿಗಳಲ್ಲಿ ತಿಳಿದುಬಂದಿತ್ತು. ಆದರೆ, “ಮುಖ್ಯಮಂತ್ರಿಗಳು ಎಡಪಂಥೀಯ ಹಿಂದೂ ವಿರೋಧಿ ಗುಂಪುಗಳ ಒತ್ತಡಕ್ಕೆ ಜಗ್ಗಿ, ಈ ಪ್ರಕರಣವನ್ನು SIT ಗೆ ವಹಿಸುವ ತರಾತುರಿ ನಿರ್ಧಾರ ಕೈಗೊಂಡಿದ್ದಾರೆ” ಎಂದು ಶಾಸಕ ಟೀಕಿಸಿದರು.

ಅವರು ಮುಂದುವರಿದು, “ಶ್ರೀ ಕ್ಷೇತ್ರ ಧರ್ಮಸ್ಥಳವು ಕೋಟಿ ಕೋಟಿ ಭಕ್ತರ ನಂಬಿಕೆಯ ಪುಣ್ಯ ಕ್ಷೇತ್ರ. ಇಂತಹ ವಿಷಯಗಳನ್ನು ಸರಕಾರವು ಗಂಭೀರವಾಗಿ ಪರಿಗಣಿಸಿ, ಸುಳ್ಳು ದೂರು ನೀಡಿದ ವ್ಯಕ್ತಿ ಮತ್ತು ಅವರ ಹಿಂದೆ ನಿಂತಿರುವ ಶಕ್ತಿಗಳ ವಿರುದ್ಧ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

Related posts

ಮರ ಬಿದ್ದರು, ವಿದ್ಯುತ್ ವ್ಯತ್ಯಾಸವಾದರೂ ಸಮರ್ಪಕವಾಗಿ ಸ್ಪಂದಿಸದ ಮೆಸ್ಕಾಂ ಇಲಾಖೆ: ಮಿತ್ತಬಾಗಿಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆರೋಪ:ಎರಡು ತಿಂಗಳೊಳಗೆ ಜೆಜೆಎಂ ಕೆಲಸ ಪೂರ್ಣವಾಗದಿದ್ದರೆ ಕಚೇರಿ ಎದರು ಧರಣಿ: ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ

Suddi Udaya

ಆ.15: ತೆಂಕಕಾರಂದೂರು- ಕಾಪಿನಡ್ಕ ಗೆಳೆಯರ ಬಳಗ ಮತ್ತು ಶ್ರೀ ಹರಿ ಭಜನಾ ಮಂಡಳಿಯಿಂದ ಮೊಸರು ಕುಡಿಕೆ ಉತ್ಸವ

Suddi Udaya

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸುವರ್ಣ ಮಹೋತ್ಸವ ಸಂಪನ್ನ: ಉತ್ತಮ ಹೈನುಗಾರರು ಹಾಗೂ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ

Suddi Udaya
error: Content is protected !!