July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ನೂರಾ ಗೋಲ್ಡ್ ನಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಡ್ರಾಯಿಂಗ್ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ಬೆಳ್ತಂಗಡಿ: ಚಿನ್ನ, ಬೆಳ್ಳಿ ಮತ್ತು ವಜ್ರಾಭರಣಗಳ ಮಾರಾಟದಲ್ಲಿ ಜನಪ್ರಿಯಗೊಂಡಿರುವ ನೂರಾ ಗೋಲ್ಡ್ ಬೆಳ್ತಂಗಡಿ ಇಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಆಭರಣಗಳ ಡಿಸೈನ್‌ನ ಚಿತ್ರ ಬರೆಯುವ ಸ್ಪರ್ಧೆ ಹಮ್ಮಿಕೊಂಡು ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.

ಸಂಸ್ಥೆಯ ಕಾರ್ಯನಿರ್ವಾಹಕ ಕೆ ಎಸ್ ಮುಸ್ತಫಾ ಕಕ್ಕಿಂಜೆ ಅವರ ನೇತೃತ್ವದಲ್ಲಿ ಜರಗಿದ ಸಮಾರಂಭದಲ್ಲಿ ಅತಿಥಿಗಳನ್ನು ಸಿಬ್ಬಂದಿಗಳು ಸ್ವಾಗತಿಸಿದರು. ಸಿದ್ದೀಕ್, ನಝೀರ್ ಹಾಗೂ ಸಿಬ್ಬಂದಿಗಳು ಜೊತೆಗಿದ್ದರು.

ಸ್ಪರ್ಧೆಯಲ್ಲಿ ತಾಲೂಕಿನ ಏಳ್ನೂರಕ್ಕೂ‌ ಹೆಚ್ಚು ಚಿತ್ರಗಳು ಬಂದಿದ್ದು ಪ್ರಬುದ್ಧ ತೀರ್ಪುಗಾರರ ಮೂಲಕ ವಿಜೇತರನ್ನು ಆಯ್ಕೆ ಮಾಡಲಾಯಿತು.
ಸ್ಪರ್ಧಾ ವಿಜೇತರಾದ ಸಹಲಾ ಫಾತಿಮಾ, ಫಾತಿಮಾ ರಫಾಹ್, ಬೃಂದಾ ಎಸ್, ಗೌತಮ್, ಇನಾಯಾ ರಮ್ಲತ್ ಇವರು ಬಹುಮಾನ ತಮ್ಮದಾಗಿಸಿಕೊಂಡರು. ಫಯಾಝ್ ಧನ್ಯವಾದ ಅರ್ಪಿಸಿದರು.


ನೂರಾ ಗೋಲ್ಡ್ ನಲ್ಲಿ ಅತ್ಯಾಧುನಿಕ ಶೈಲಿಯ ಆಭರಣಗಳು, ಏಂಟಿಕ್ ಮತ್ತು ಸೆಮಿ ಆಂಟಿಕ್ ಆಭರಣಗಳು, ಡೈಮಂಡ್ ಗಳ ಆಭರಣಗಳ ಅಪೂರ್ವ ಸಂಗ್ರಹವಿದ್ದು ಗ್ರಾಹಕರ ಮನಸಿಗೆ ಒಪ್ಪುವ ಡಿಸೈನ್ ಮಾಡಿಕೊಡುವ ವ್ಯವಸ್ಥೆಯೂ ಇದೆ. ಗ್ರಾಹಕರ ಸೇವೆಯೇ ನಮ್ಮ ಪ್ರಥಮ ಆದ್ಯತೆ ಎಂದು ನಿರ್ವಾಹಕ ಮುಸ್ತಫ ಕಕ್ಕಿಂಜೆ ತಿಳಿಸಿದರು.

Related posts

ಬೆಳ್ತಂಗಡಿ: ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ 100ನೇ ಹುಟ್ಟುಹಬ್ಬದ ಅಂಗವಾಗಿ ಶ್ರೀರಾಘವೇಂದ್ರ ಮಠದ ಸುಂದರ ಪರಿಸರದಲ್ಲಿ “ಪ್ರೇಮ ತರು” ಸಸಿಗಳನ್ನು ನೆಡುವ ಕಾರ್ಯಕ್ರಮ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya

ಎರುಕಡಪ್ಪು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ರಿಂದ ಹೇವಾಜೆ ಶಾಲೆಗೆ ಯಾವುದೇ ಅನುದಾನ ಮಂಜೂರಾಗಿಲ್ಲ: ಮಾಹಿತಿ ಹಕ್ಕಿನಲ್ಲಿ ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

Suddi Udaya
error: Content is protected !!