23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ ಮುದ್ದಾಡಿಯ ಮಂಗಿನಿಬೆಟ್ಟು ಗದ್ದೆಯಲ್ಲಿ ಆಟಿಡೊಂಜಿ ಕೆಸರ್‌ದ ಗೊಬ್ಬು

ಬಜಿರೆ: ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಬಜಿರೆ ಬತ್ತಾರು, ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಜಿರೆ, ಆಟಿಡೊಂಜಿ ಕೆಸರ್‌ದ ಗೊಬ್ಬು ಆಚರಣಾ ಸಮಿತಿ ಬಜಿರೆ, ಪ್ರಗತಿಬಂಧು ಜ್ಞಾನವಿಕಾಸ ಸ್ವ-ಸಹಾಯ ಸಂಘಗಳ ಒಕ್ಕೂಟ ಬಜಿರೆ, ವಿಘ್ನೇಶ್ವರ ಫ್ರೆಂಡ್ಸ್ ಬಜಿರೆ, ಯುವಶಕ್ತಿ ಸ್ಪೋರ್ಟ್ಸ್ ಕ್ಲಬ್ ಬಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ವರ್ಷದ ಆಟಿಡೊಂಜಿ ಕೆಸರ್‌ದ ಗೊಬ್ಬು 2025 ಬಜಿರೆ ಮುದ್ದಾಡಿಯ ಮಂಗಿನಿಬೆಟ್ಟು ಗದ್ದೆಯಲ್ಲಿ ಆ.17 ರಂದು ವಿಜೃಂಭಣೆಯಿಂದ ಜರುಗಿತು.

ಬೆಳಿಗ್ಗೆ ಶ್ರೀ ಕ್ಷೇತ್ರ ಮುದ್ದಾಡಿಯ ಆಡಳಿತ ಮೊಕ್ತೇಸರ ಸುರೇಶ್ ಕುಮಾರ್ ಆರಿಗ ದೀಪ ಬೆಳಗಿಸಿ ಉದ್ಘಾಟನೆಯನ್ನು ನೆರವೇರಿಸಿ ಶುಭಹಾರೈಸಿದರು. ಕೆಸರುಗದ್ದೆಯ ಉದ್ಘಾಟನೆಯನ್ನು ದ.ಕ. ಜಿಲ್ಲಾ ಕಂಬಳ ಸಮಿತಿ ಪ್ರಧಾನ ತೀರ್ಪುಗಾರರಾದ ಎಡ್ತೂರು ರಾಜೀವ ಶೆಟ್ಟಿ ನೆರವೇರಿಸಿ ಶುಭನುಡಿಗಳನ್ನಾಡಿದರು.


ಮುಖ್ಯ ಅತಿಥಿಗಳಾಗಿ ವೇಣೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಕಾಶಿನಾಥ್, ವೇಣೂರು ಪ್ರಾ.ಕೃ.ಪ.ಸಹಕಾರಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ, ಬಜಿರೆ ಹಿಂದೂ ರುದ್ರಭೂಮಿ ಸಮಿತಿಯ ಅಧ್ಯಕ್ಷ ಭಾಸ್ಕರ ಪೈ ವೇಣೂರು, ಗಣೇಶ್ ನಾರಾಯಣ ಪಂಡಿತ್ ಮೂಡುಕೋಡಿ ವೇಣೂರು, ಶ್ರೀಮತಿ ಸುಲೋಚನ ಎಸ್.ಹೆಗ್ಡೆ ಮಂಗಿನಿ, ಬಜಿರೆ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್ ಪೂಜಾರಿ, ಕಾರ್ಯಕ್ರಮದ ಗೌರವಾಧ್ಯಕ್ಷ ಅರುಣ್ ಕುಮಾರ್ ಐದಲ್ಕೆ, ಅಧ್ಯಕ್ಷ ಜಯಶಂಕರ ಹೆಗ್ಡೆ ಮಂಗಿನಿ ಮತ್ತಿತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಇಡೀ ದಿನ ನಡೆದ ಕಾರ್ಯಕ್ರಮದಲ್ಲಿ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎ. ಜಯರಾಮ ಶೆಟ್ಟಿ, ವೇಣೂರು ಗ್ರಾ.ಪಂ. ಸದ್ಯಸ್ಯರುಗಳಾದ ಲೋಕಯ್ಯ ಪೂಜಾರಿ, ಸುನೀಲ್ ಪೂಜಾರಿ ಜತನಂಗೇರಿಕೋಡಿ, ಲೀಲಾವತಿ ಆನಂದ ಪೂಜಾರಿ, ಶ್ರೀಮತಿ ಸುಜಾತ ಭಾಗವಹಿಸಿದ್ದರು. ಭರತ್‌ರಾಜ್ ಮುದ್ಯ ಪಾಪುದಡ್ಕ, ಯೋಜನಾಧಿಕಾರಿ ಅಶೋಕ್ ಕುಮಾರ್, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಮತ್ತು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಸತೀಶ್ ಹೆಗ್ಡೆ, ಹೊಸಪಟ್ಣ ಸತ್ಯನಾರಾಯಣ ಸೇವಾ ಸಮಿತಿಯ ಸಂಚಾಲಕ ಗಣೇಶ್ ಪೂಜಾರಿ, ವಿವಿಧ ಕ್ಷೇತ್ರದ ಗಣ್ಯರು, ಮಹನೀಯರು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಆಗಮಿಸಿದ ಎಲ್ಲಾ ಅತಿಥಿ ಗಣ್ಯರನ್ನು ತುಳುನಾಡಿನ ಸಂಪ್ರದಾಯದಂತೆ ವೀಲ್ಯ ಅಡಿಕೆ ನೀಡಿ ಶಾಲು ಹೊದಿಸಿ ಸ್ವಾಗತಿಸಲಾಯಿತು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ತಾಲೂಕಿನ ಶಾಸಕರಾದ ಹರೀಶ್ ಪೂಂಜ ಆಗಮಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ವೇಣೂರು ನಮನ ಕ್ಲಿನಿಕ್‌ನ ಡಾ| ಶಾಂತಿಪ್ರಸಾದ್ ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ಎಕ್ಸೆಲ್ ಕಾಲೇಜು ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಬಿ. ಸುಮಂತ್ ಕುಮಾರ್ ಆಗಮಿಸಿ ಶುಭನುಡಿಗಳನ್ನಾಡಿದರು.
ಈ ಸಂದರ್ಭ ಕಾರ್ಯಕ್ರಮದ ಉಪಾಧ್ಯಕ್ಷ ವಿಶ್ವನಾಥ ಆಚಾರ್ಯ ಹಿದೆಕ್ಯಾರು, ಕಾರ್ಯದರ್ಶಿಗಳಾದ ಗೋಪಾಲ ಆಚಾರ್ಯ ಕೊಡಪಟ್ಯ, ರಕ್ಷಿತ್ ಪುನ್ಕೆದಡಿ, ಕೋಶಾಧಿಕಾರಿ ನಾರಾಯಣ ಆರ್. ಪೂಜಾರಿ, ವಿಘ್ನೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಪ್ರವೀಣ್ ಪೂಜಾರಿ, ಪ್ರಗತಿಬಂಧು ಒಕ್ಕೂಟ ಬಜಿರೆಯ ಗಿರೀಶ್ ಕುಲಾಲ್, ವಿಘ್ನೇಶ್ವರ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಸುದರ್ಶನ ಹೆಗ್ಡೆ, ಯುವಶಕ್ತಿ ಸ್ಪೋಟ್ಸ್ ಕ್ಲಬ್‌ನ ಸಂಚಾಲಕ ರಕ್ಷಿತ್ ಬಜಿರೆ, ಬಜಿರೆ ಜನಜಾಗೃತಿ ಗ್ರಾಮಸಮಿತಿಯ ಅಧ್ಯಕ್ಷ ಅಶೋಕ್ ಪೂಜಾರಿ ಕಜಿಪಟ್ಟ, ಸೇವಾ ಪ್ರತಿನಿಧಿ ರೂಪ ಚಂದನ ಮತ್ತಿತರ ಪದಾಧಿಕಾರಿಗಳು ಹಾಗೂ ಊರಿನ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. ಸತೀಶ್ ಹೊಸ್ಮಾರು ಕಾರ್ಯಕ್ರಮ ನಿರೂಪಿಸಿದರು.

Related posts

ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ನಾಮನಿರ್ದೇಶನ

Suddi Udaya

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya

ಬರೆಂಗಾಯ ಶಾಲೆಯಲ್ಲಿ ಅಮೃತ ಮಹೋತ್ಸವದ ಪ್ರಯುಕ್ತ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಊರವರಿಗೆ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಉಳ್ತೂರು: ದರ್ಸ್ ವಾರ್ಷಿಕ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

Suddi Udaya
error: Content is protected !!