30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಹಾಗೂ ನಿಸರ್ಗ ಯುವಜನೇತರ ಮಂಡಲದ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

ನಿಡ್ಲೆ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಬರೆಂಗಾಯ ಹಾಗೂ ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ ಆ. 17ರಂದು ಬರೆಂಗಾಯ ಉನ್ನತೀಕರಿಸಿದ ಹಿ. ಪ್ರಾ. ಶಾಲಾ ವಠಾರದಲ್ಲಿ ಜರುಗಿತು.


ಕಾರ್ಯಕ್ರಮವನ್ನು ಬೆಳಗ್ಗೆ ಮಧುಕರ ರಾವ್ ಮಚ್ಚಳೆ ಉದ್ಘಾಟಿಸಿದರು. ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ ಹೇಮಂತ್ ಗೌಡ ಕಜೆ ವಹಿಸಿದ್ದರು. ವಿಶ್ವಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ವಿಷ್ಣು ಮರಾಠೆ ಕಾಟ್ಲ, ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಅಧ್ಯಕ್ಷ ಪುನೀತ್ ಪೊಂರ್ದಿಲ, ಬರೆಂಗಾಯ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ರುಕ್ಮಯ್ಯ ಪೂಜಾರಿ ಪೋರ್ಕಳ, ಮಧುಕರ ರಾವ್ ಮಚ್ಚಳೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಸಮಾಜಸೇವಕರಾದ ಸುಂದರ ಗೌಡ ಹಾಗೂ ಮಂಗಳೂರು ವಿಜಯಕುಮಾರ್ ಕೊಡಿಯಲ್ ಬೈಲ್ ಇವರನ್ನು ಸನ್ಮಾನಿಸಲಾಯಿತು.


ಗಾಯತ್ರಿ ಹೆಚ್. ಗೌಡ ಗುತ್ತಿಮಾರು ಪ್ರಾರ್ಥಿಸಿದರು. ಗುಣಶ್ರೀ ಕಜೆ ಸ್ವಾಗತಿಸಿದರು. ಗೀತಾ ಪಿ. ಡಿ. ಕಜೆ ಕಾರ್ಯಕ್ರಮ ನಿರೂಪಿಸಿ, ಆದಿತ್ಯ ಜೆ. ಶೆಟ್ಟಿ ಧನ್ಯವಾದವಿತ್ತರು.

ಶಾಸಕ ಹರೀಶ್ ಪೂಂಜ ಹಾಗೂ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಸ್ಪರ್ಧೆಗಳು, ಮಕ್ಕಳಿಗೆ ಮುದ್ದುಕೃಷ್ಣ ವೇಷ ಸ್ಪರ್ಧೆ ಜರಗಿತು.
ಕಾರ್ಯಕ್ರಮದ ಯಶಸ್ವಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಬರಂಗಾಯ ಹಾಗೂ ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ನಿಡ್ಲೆ ಇದರ ಪದಾಧಿಕಾರಿಗಳು, ಸರ್ವ ಸದಸ್ಯರು ಸಹಕರಿಸಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya

ಬಳಂಜ ಶಾಲೆಗೆ ಹಳೆವಿದ್ಯಾರ್ಥಿಗಳಿಂದ ಎರಡು ಟಿವಿ ಕೊಡುಗೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯು ‘ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯಮಟ್ಟದ ಶಾಲಾ ಪ್ರಶಸ್ತಿ’ಗೆ ಆಯ್ಕೆ

Suddi Udaya

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆ ಮತ್ತು ಶಿಕ್ಷಣ ಕಾರ್ಯಾಗಾರ

Suddi Udaya

ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!