September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಹಾಗೂ ನಿಸರ್ಗ ಯುವಜನೇತರ ಮಂಡಲದ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

ನಿಡ್ಲೆ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಬರೆಂಗಾಯ ಹಾಗೂ ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ ಆ. 17ರಂದು ಬರೆಂಗಾಯ ಉನ್ನತೀಕರಿಸಿದ ಹಿ. ಪ್ರಾ. ಶಾಲಾ ವಠಾರದಲ್ಲಿ ಜರುಗಿತು.


ಕಾರ್ಯಕ್ರಮವನ್ನು ಬೆಳಗ್ಗೆ ಮಧುಕರ ರಾವ್ ಮಚ್ಚಳೆ ಉದ್ಘಾಟಿಸಿದರು. ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ ಹೇಮಂತ್ ಗೌಡ ಕಜೆ ವಹಿಸಿದ್ದರು. ವಿಶ್ವಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ವಿಷ್ಣು ಮರಾಠೆ ಕಾಟ್ಲ, ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಅಧ್ಯಕ್ಷ ಪುನೀತ್ ಪೊಂರ್ದಿಲ, ಬರೆಂಗಾಯ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ರುಕ್ಮಯ್ಯ ಪೂಜಾರಿ ಪೋರ್ಕಳ, ಮಧುಕರ ರಾವ್ ಮಚ್ಚಳೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಸಮಾಜಸೇವಕರಾದ ಸುಂದರ ಗೌಡ ಹಾಗೂ ಮಂಗಳೂರು ವಿಜಯಕುಮಾರ್ ಕೊಡಿಯಲ್ ಬೈಲ್ ಇವರನ್ನು ಸನ್ಮಾನಿಸಲಾಯಿತು.


ಗಾಯತ್ರಿ ಹೆಚ್. ಗೌಡ ಗುತ್ತಿಮಾರು ಪ್ರಾರ್ಥಿಸಿದರು. ಗುಣಶ್ರೀ ಕಜೆ ಸ್ವಾಗತಿಸಿದರು. ಗೀತಾ ಪಿ. ಡಿ. ಕಜೆ ಕಾರ್ಯಕ್ರಮ ನಿರೂಪಿಸಿ, ಆದಿತ್ಯ ಜೆ. ಶೆಟ್ಟಿ ಧನ್ಯವಾದವಿತ್ತರು.

ಶಾಸಕ ಹರೀಶ್ ಪೂಂಜ ಹಾಗೂ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಸ್ಪರ್ಧೆಗಳು, ಮಕ್ಕಳಿಗೆ ಮುದ್ದುಕೃಷ್ಣ ವೇಷ ಸ್ಪರ್ಧೆ ಜರಗಿತು.
ಕಾರ್ಯಕ್ರಮದ ಯಶಸ್ವಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಬರಂಗಾಯ ಹಾಗೂ ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ನಿಡ್ಲೆ ಇದರ ಪದಾಧಿಕಾರಿಗಳು, ಸರ್ವ ಸದಸ್ಯರು ಸಹಕರಿಸಿದ್ದರು.

Related posts

ಸರಕಾರವು ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿದೆ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ಆಘಾತಕಾರಿ: ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆಕ್ಷೇಪ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ “ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ , ಕಬ್ಸ್ ಮತ್ತು ಬುಲ್ ಬುಲ್ಬಸ್ ಹಾಗೂ ಬನ್ನಿಸ್ ವತಿಯಿಂದ ಧ್ವಜ ದಿನಾಚರಣೆ

Suddi Udaya

ಬಿಜೆಪಿಗರೇ, ಸರ್ಕಾರದ ವಿರುದ್ಧ ಸುಳ್ಳು ಆರೋಪ ನಿಲ್ಲಿಸಿ, ತಾಲೂಕಿಗೆ ನೀಡಿದ ಅಭಿವೃದ್ಧಿ, ಯೋಜನೆ ಗಮನಿಸಿ: ಅಭಿವೃದ್ಧಿ ಅನುದಾನಗಳ ಪಟ್ಟಿಗಳೊಂದಿಗೆ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಪೋಸ್ಟರ್ ಅಭಿಯಾನ

Suddi Udaya

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

Suddi Udaya
error: Content is protected !!