38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಸಮಾರೋಪ ಸಮಾರಂಭ

ಬೆಳಾಲು : ಮೈತ್ರಿ ಯುವಕ ಮಂಡಲ ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಕೃಷ್ಣವೇಷ, ಆಟೋಟ ಸ್ಪರ್ಧೆಯ ಸಮಾರೋಪ ಸಮಾರಂಭ ಆ.17 ರಂದು ಸಂಘದ ವಠಾರದಲ್ಲಿ ನೆರವೇರಿತು.

ಉಪನ್ಯಾಸಕಿ ಡಾ. ಶೀಲಾವತಿಯವರು ಧಾರ್ಮಿಕ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಬೌತಿಸ್ ಡಿ’ಸೋಜ ಬೆಳಾಲು, ಬೆಳಾಲು ಹಾಲು ಉತ್ಪಾದಕರ ಸಂಘ ಕಾರ್ಯದರ್ಶಿ ಸುಕೇಶ್ ಭಾಗವಹಿಸಿದ್ದರು, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹಾಂತೇಶ್ ಚೌಹಾನ್, ಜೇಸ್ಸಿ ಡಿ’ಸೋಜ, ಪದ್ಮಾವತಿ ಬನoದೂರು, ಕು. ಮನಶ್ರೀ ಇವರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿ ಮೈತ್ರಿ ಯುವಕ ಮಂಡಲ ಅಧ್ಯಕ್ಷ ನಿತಿನ್ ಮೋನಿಸ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ರಾಜೇಶ್ ಪಾರಳ, ಕಾರ್ಯದರ್ಶಿ ವಿಘ್ನೇಶ್ ಅನಂತೋಡಿ, ಪದಾಧಿಕಾರಿಗಳು ಉಪಸ್ಥಿತರಿದ್ದರು. ರಾಜೇಶ್ ಪಾರಳ ಸ್ವಾಗತಿಸಿ, ಸಂಘದ ಸಲಹೆಗಾರರು ನೋಟರಿ ವಕೀಲರಾದ ಶ್ರೀನಿವಾಸ ಗೌಡ ಕಾರ್ಯಕ್ರಮ ನಿರೂಪಿಸಿ, ಸಾತ್ವಿಕ್ ಸನ್ಮಾನ ಪತ್ರ ವಾಚಿಸಿದರು. ಕಿರಣ್ ಈರೆoತ್ಯಾರ್ ಬಹುಮಾನ ವಿಜೇತ ಪಟ್ಟಿ ವಾಚಿಸಿದರು. ಅಸೀಫ್ ಮುಂಡೆತ್ಯಾರು ಧನ್ಯವಾದವಿತ್ತರು. ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ನಡೆಯಿತು.

Related posts

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ

Suddi Udaya
error: Content is protected !!