September 6, 2026
ತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಗೇರುಕಟ್ಟೆ : ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ
ಭಜನಾ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ ಆ.17ರಂದು ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.

ಮಧ್ಯಾಹ್ನ ಮಹಿಳೆಯರಿಂದ ಭಜನಾ ಕಾರ್ಯಕ್ರಮ ಮಹಾಪೂಜೆ, ಪ್ರಸಾದ ವಿತರಣೆ, ನಂತರ 3 ರಿಂದ 6 ವರ್ಷದ ಮಕ್ಕಳಿಗೆ ಶ್ರೀಕೃಷ್ಣ ಹಾಗೂ ರಾಧೆ ಸ್ಪರ್ಧೆ ಹಾಗೂ ಮಹಿಳೆಯರಿಂದ ಮಡಿಕೆ ಒಡೆಯುವ ಮತ್ತು ವಿವಿಧ ಸ್ಪರ್ಧೆಗಳು ಜರುಗಿತು.

ಈ ವೇಳೆ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿ ಅಧ್ಯಕ್ಷೆ ರೇವತಿ ನಾರಾಯಣ, ಕಾರ್ಯದರ್ಶಿ ರೇಖಾ ರಾಘವ ಎಚ್, ಕೋಶಾಧಿಕಾರಿ ಕಲಾ ಲಿಂಗಪ್ಪ ಶೆಟ್ಟಿಗಾರ್, ಶ್ರೀ ಕೃಷ್ಣ ಮಹಿಳಾ ಸೇವಾ ಟ್ರಸ್ಟಿನ ಅಧ್ಯಕ್ಷೆ ದೇವಕಿ, ಕಾರ್ಯದರ್ಶಿ ವಿಶಾಲಾಕ್ಷಿ ಕೆ.ಬಿ., ಕೋಶಾಧಿಕಾರಿ ಯಶವಂತಿ ಸತೀಶ್, ನಿರ್ದೇಶಕರಾದ ಜ್ಯೋತಿ ಮಧ್ವರಾಜ್, ಮೀನಾಕ್ಷಿ, ನವೀನ ರಮೇಶ, ಶಾಂತಿ ರತ್ನಾಕರ, ಮೋಹಿನಿ ಶ್ರೀಧರ, ಗುಲಾಬಿ ಕೊರಗಪ್ಪ, ರೇವತಿ ಪ್ರಭಾಕರ, ರೇವತಿ ನಾರಾಯಣ, ಸದಸ್ಯರಾದ ಸುಭಾಷಿಣಿ ಜನಾರ್ದನ ಗೌಡ ಕೆ., ವಸಂತಿ, ಅನಿತಾ ದಯಾನಂದ, ಭಜನಾ ಪರಿಷತ್ತು ಲಾಯಿಲ ವಲಯ ಅಧ್ಯಕ್ಷ ಜನಾರ್ದನ ಹಾಗೂ ಸ್ಥಳೀಯ ಸದಸ್ಯರು ಉಪಸ್ಥಿತರಿದ್ದರು.

ವಸಂತ ಮಜಲು , ಶೇಖರ ನಾಯ್ಕ, ರಾಜೇಶ್ ಪೆಂರ್ಬುಡ, ಯೋಗೀಶ್ ಕುಮಾರ್, ವಿಜಯ ಗೌಡ ಕೆ., ಯಶೋಧರ ಶೆಟ್ಟಿ ಕೆ.,ಪುರಂದರ ಜಿ., ನವೀನ್ ಗೌಡ, ಸದಾನಂದ ಶೆಟ್ಟಿ ವೈ., ರಾಘವ ಹೆಚ್., ಸತೀಶ್ ಭಂಡಾರಿ ಸಹಕರಿಸಿದರು.
ಅಂಚೆ ಇಲಾಖೆ ನಿವೃತ್ತ ವಿಠ್ಠಲ ಶೆಟ್ಟಿ ಉಪ್ಪಡ್ಕ ನಿರೂಪಿಸಿ, ಡಾಕಯ್ಯ ಗೌಡ ಹೀರ್ಯ ವಂದಿಸಿದರು.

Related posts

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಮೂಡುಬಿದಿರೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 35ನೇ ಶಾಖೆ ಉದ್ಘಾಟನೆ

Suddi Udaya

ಶಿಶಿಲ: ತುಳುನಾಡ ನರ್ಸರಿಗೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಆಯ್ಕೆ

Suddi Udaya

ನಾರಾವಿಯಲ್ಲಿ ಉಚಿತ ನೇತ್ರಾ ಚಿಕಿತ್ಸಾ ಶಿಬಿರ

Suddi Udaya

ಮೀಯಾರು ಕೆಮ್ಮಟ್ಟೆಯಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ ಟ್ರಸ್ಟ್ ವತಿಯಿಂದ ನೀರು ಉಳಿಸಿ ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya
error: Content is protected !!