23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಗೇರುಕಟ್ಟೆ : ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ
ಭಜನಾ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ ಆ.17ರಂದು ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.

ಮಧ್ಯಾಹ್ನ ಮಹಿಳೆಯರಿಂದ ಭಜನಾ ಕಾರ್ಯಕ್ರಮ ಮಹಾಪೂಜೆ, ಪ್ರಸಾದ ವಿತರಣೆ, ನಂತರ 3 ರಿಂದ 6 ವರ್ಷದ ಮಕ್ಕಳಿಗೆ ಶ್ರೀಕೃಷ್ಣ ಹಾಗೂ ರಾಧೆ ಸ್ಪರ್ಧೆ ಹಾಗೂ ಮಹಿಳೆಯರಿಂದ ಮಡಿಕೆ ಒಡೆಯುವ ಮತ್ತು ವಿವಿಧ ಸ್ಪರ್ಧೆಗಳು ಜರುಗಿತು.

ಈ ವೇಳೆ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿ ಅಧ್ಯಕ್ಷೆ ರೇವತಿ ನಾರಾಯಣ, ಕಾರ್ಯದರ್ಶಿ ರೇಖಾ ರಾಘವ ಎಚ್, ಕೋಶಾಧಿಕಾರಿ ಕಲಾ ಲಿಂಗಪ್ಪ ಶೆಟ್ಟಿಗಾರ್, ಶ್ರೀ ಕೃಷ್ಣ ಮಹಿಳಾ ಸೇವಾ ಟ್ರಸ್ಟಿನ ಅಧ್ಯಕ್ಷೆ ದೇವಕಿ, ಕಾರ್ಯದರ್ಶಿ ವಿಶಾಲಾಕ್ಷಿ ಕೆ.ಬಿ., ಕೋಶಾಧಿಕಾರಿ ಯಶವಂತಿ ಸತೀಶ್, ನಿರ್ದೇಶಕರಾದ ಜ್ಯೋತಿ ಮಧ್ವರಾಜ್, ಮೀನಾಕ್ಷಿ, ನವೀನ ರಮೇಶ, ಶಾಂತಿ ರತ್ನಾಕರ, ಮೋಹಿನಿ ಶ್ರೀಧರ, ಗುಲಾಬಿ ಕೊರಗಪ್ಪ, ರೇವತಿ ಪ್ರಭಾಕರ, ರೇವತಿ ನಾರಾಯಣ, ಸದಸ್ಯರಾದ ಸುಭಾಷಿಣಿ ಜನಾರ್ದನ ಗೌಡ ಕೆ., ವಸಂತಿ, ಅನಿತಾ ದಯಾನಂದ, ಭಜನಾ ಪರಿಷತ್ತು ಲಾಯಿಲ ವಲಯ ಅಧ್ಯಕ್ಷ ಜನಾರ್ದನ ಹಾಗೂ ಸ್ಥಳೀಯ ಸದಸ್ಯರು ಉಪಸ್ಥಿತರಿದ್ದರು.

ವಸಂತ ಮಜಲು , ಶೇಖರ ನಾಯ್ಕ, ರಾಜೇಶ್ ಪೆಂರ್ಬುಡ, ಯೋಗೀಶ್ ಕುಮಾರ್, ವಿಜಯ ಗೌಡ ಕೆ., ಯಶೋಧರ ಶೆಟ್ಟಿ ಕೆ.,ಪುರಂದರ ಜಿ., ನವೀನ್ ಗೌಡ, ಸದಾನಂದ ಶೆಟ್ಟಿ ವೈ., ರಾಘವ ಹೆಚ್., ಸತೀಶ್ ಭಂಡಾರಿ ಸಹಕರಿಸಿದರು.
ಅಂಚೆ ಇಲಾಖೆ ನಿವೃತ್ತ ವಿಠ್ಠಲ ಶೆಟ್ಟಿ ಉಪ್ಪಡ್ಕ ನಿರೂಪಿಸಿ, ಡಾಕಯ್ಯ ಗೌಡ ಹೀರ್ಯ ವಂದಿಸಿದರು.

Related posts

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ಇಂದಬೆಟ್ಟು: ಪಿಲಾಪ್ಪಾಡಿ ನಿವಾಸಿ ಕುಸುಮಾವತಿ ನಿಧನ

Suddi Udaya

ಉರುವಾಲು-ಕಾಯರ್ಪಾಡಿ ಸಂಪರ್ಕ ರಸ್ತೆ ಮರು ಡಾಮರೀಕರಣ: ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya

ವಿಧಾನಪರಿಷತ್ ಉಪಚುನಾವಣೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮಚ್ಚಿನ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!