July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಪ್ರಕರಣದಲ್ಲಿ ಸರಕಾರ ತುರ್ತು ನಿರ್ಧಾರ ಮಾಡಿದೆ : ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು: ಶಾಸಕ ಕಿಶೋರ್ ಕುಮಾರ್ ಪುತ್ತೂರು

ಬೆಂಗಳೂರು: ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನ ಪರಿಷತ್ತಿನ ಶೂನ್ಯವೇಳೆಯಲ್ಲಿ ಮಾತನಾಡಿ, ಧರ್ಮಸ್ಥಳ ಗ್ರಾಮದಲ್ಲಿ “ಶವವನ್ನು ಹೂತಿದ್ದೇನೆ” ಎಂದು ಹೇಳಿಕೊಂಡ ವ್ಯಕ್ತಿಯ ಮಂಪರು (ಬ್ರೈನ್‌ ಮ್ಯಾಪಿಂಗ್) ಪರೀಕ್ಷೆ ನಡೆಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.

ಅನಾಮಿಕ ವ್ಯಕ್ತಿಯೋರ್ವ ಬುರುಡೆ ಹಿಡಿದುಕೊಂಡು “ನಾನು ಧರ್ಮಸ್ಥಳದಲ್ಲಿ 13 ಕಡೆ ನೂರಾರು ಮಹಿಳೆಯರು ಮತ್ತು ಬಾಲಕಿಯರ ಶವವನ್ನು ಹೂತಿದ್ದೇನೆ” ಎಂದು ಹೇಳಿದ ಘಟನೆಗೆ ಸಂಬಂಧಿಸಿದಂತೆ, ಮಂಗಳೂರಿನ ಪೊಲೀಸ್ ಅಧೀಕ್ಷಕರು ಮಂಪರು ಪರೀಕ್ಷೆ ಮಾಡಬೇಕೆಂದು ಮೊದಲು ನಿರ್ಧರಿಸಿದ್ದರು ಎಂಬುದು ಮಾಧ್ಯಮ ವರದಿಗಳಲ್ಲಿ ತಿಳಿದುಬಂದಿತ್ತು. ಆದರೆ, “ಮುಖ್ಯಮಂತ್ರಿಗಳು ಎಡಪಂಥೀಯ ಹಿಂದೂ ವಿರೋಧಿ ಗುಂಪುಗಳ ಒತ್ತಡಕ್ಕೆ ಜಗ್ಗಿ, ಈ ಪ್ರಕರಣವನ್ನು SIT ಗೆ ವಹಿಸುವ ತರಾತುರಿ ನಿರ್ಧಾರ ಕೈಗೊಂಡಿದ್ದಾರೆ” ಎಂದು ಶಾಸಕ ಟೀಕಿಸಿದರು.

ಅವರು ಮುಂದುವರಿದು, “ಶ್ರೀ ಕ್ಷೇತ್ರ ಧರ್ಮಸ್ಥಳವು ಕೋಟಿ ಕೋಟಿ ಭಕ್ತರ ನಂಬಿಕೆಯ ಪುಣ್ಯ ಕ್ಷೇತ್ರ. ಇಂತಹ ವಿಷಯಗಳನ್ನು ಸರಕಾರವು ಗಂಭೀರವಾಗಿ ಪರಿಗಣಿಸಿ, ಸುಳ್ಳು ದೂರು ನೀಡಿದ ವ್ಯಕ್ತಿ ಮತ್ತು ಅವರ ಹಿಂದೆ ನಿಂತಿರುವ ಶಕ್ತಿಗಳ ವಿರುದ್ಧ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

Related posts

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya

ನಡ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಜೂ. 29 : ಉಜಿರೆಯಲ್ಲಿ ರೈನಾಥನ್ ಸ್ಪರ್ಧೆ, ಸಂತೋಷದಾಯಕ ಮಳೆಗಾಲದ ಓಟ: ಮಾದಕ ವ್ಯವಸನದ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶವೇ ರೈನಥಾನ್-2025

Suddi Udaya

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya
error: Content is protected !!