25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳ ಹಸ್ತಾಂತರ

ಪೆರ್ಲ ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಭಾರತದ 79ನೇ ಸ್ವಾತಂತ್ರ್ಯೋತ್ಸವ ಆಚರಣೆ ಜರುಗಿತು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳು ಶಾಲೆಯಲ್ಲಿ ಕೊಡುಗೆಯಾಗಿ ನೀಡಿದಂತಹ ನೂತನ ಧ್ವಜಸ್ತಂಭ, ಇಂಟರ್ ಲಾಕ್ ವ್ಯವಸ್ಥೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೇಶವ ಗೌಡ ಮತ್ತು ಪದಾಧಿಕಾರಿಗಳಾದ ದಿನೇಶ್ ಅಡ್ಡಾರು, ಲಕ್ಷ್ಮಿಕಾಂತ್ ಕೀಲಾರು, ಹರೀಶ್ ಕೋಡಿಮಜಲು, ನವೀನ್ ಪ್ರಕಾಶ್, ತಿರುಮಲೇಶ್ ಭಾಗವಹಿಸಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ಕೆ ಸ್ವಾಗತಿಸಿ , ಹಳೆ ವಿದ್ಯಾರ್ಥಿ ಸಂಘಕ್ಕೆ ಶಾಲೆಯ ಪರವಾಗಿ ಕೃತಜ್ಞತೆಗಳನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಮಹಾಬಲ ಗೌಡ, ಸದಸ್ಯರಾದ ಶ್ರೀನಿವಾಸ ಗೌಡ, ಕವಿತಾ, ಶ್ಯಾಮಲಾ, ಶಶಿಧರ ಗೌಡ ಹಾಗೂ ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.

Related posts

ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya

ರಸ್ತೆಯಲ್ಲೇ ಹರಿದ ಮಳೆ ನೀರು: ಶಾಸಕ ಹರೀಶ್ ಪೂಂಜರಿಂದ ತುರ್ತು ಸ್ಪಂದನೆ , ಚರಂಡಿ ದುರಸ್ತಿ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya
error: Content is protected !!