22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಿಯೋ ಕ್ಲಬ್ ನ ಪದಗ್ರಹಣ ಸಮಾರಂಭ

ಬೆಳ್ತಂಗಡಿ : ಲಿಯೋ ಕ್ಲಬ್ ಬೆಳ್ತಂಗಡಿ ಇದರ ಪದಗ್ರಹಣ ಸಮಾರಂಭವು ಬಲಿಪ ರೆಸಾರ್ಟ್ ನಡದಲ್ಲಿ ಜರುಗಿತು.

ಪದಗ್ರಹಣ ಅಧಿಕಾರಿಯಾಗಿ ಆಗಮಿಸಿದ ಲಿಯೋ ಲಯನ್ ಡಾ. ರಂಜಿತಾ ಶೆಟ್ಟಿ ಯವರು ನೂತನ ತಂಡದ ಪದಗ್ರಹಣವನ್ನು ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಲಿಯೋ ಅಧ್ಯಕ್ಷೆ ಲಿಯೋ ಶ್ರೀನಿಧಿ ಶೆಟ್ಟಿಯವರು ಹೊಸದಾಗಿ ಸೇರ್ಪಡೆಗೊಂಡ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಪ್ರಾಂತ್ಯಾಧ್ಯಕ್ಷ ಲಯನ್ ಜಗದೀಶ್ಚಂದ್ರ ಭಾಗವಹಿಸಿದರು. ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಮುರಳಿ ಬಲಿಪ, ಕಾರ್ಯದರ್ಶಿ ಲಯನ್ ಅಮಿತಾನಂದ ಹೆಗ್ಡೆ, ಕೋಶಾಧಿಕಾರಿ ಲಯನ್ ಸುಭಾಷಿನಿ, ಲಿಯೋ ಕ್ಲಬ್ ನ ಮಾರ್ಗದರ್ಶಕ ಲಯನ್ ಕೃಷ್ಣ ಕೆ ಆಚಾರ್ಯ, ಲಯನ್ ಡಾ.ದೇವಿ ಪ್ರಸಾದ್ ಬೊಲ್ಮಾ, ಕಳೆದ ಸಾಲಿನ ಕೋಶಾಧಿಕಾರಿ ಲಿಯೊ ಅಭಿಜ್ಞಾ ಬೊಲ್ಮಾ, ಪ್ರಸ್ತುತ ಸಾಲಿನ ಲಿಯೋ ಕ್ಲಬ್ ನ ಅಧ್ಯಕ್ಷೆ ಲಿಯೋ ಭಾಷಿಣಿ, ಕೋಶಾಧಿಕಾರಿ ಲಿಯೋ ಗ್ಲೆನ್ ಮೋನಿಸ್ ಉಪಸ್ಥಿತರಿದ್ದರು.

ನಿಕಟ ಪೂರ್ವ ಅಧ್ಯಕ್ಷ ಲಿಯೊ ಅಪ್ಸರ ಗೌಡ ಸ್ವಾಗತಿಸಿದರು. ಕಾರ್ಯದರ್ಶಿ ಲಿಯೋ ದೀಕ್ಷಿತ್ ಧನ್ಯವಾದ ನೀಡಿದರು.

Related posts

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya

ಚಾರ್ಮಾಡಿ: ಆಡಿಮಾರು ಇಂದಿರಾ ಮೋಹನ್ ಮನೆಗೆ ಬಿದ್ದ ಬೃಹತ್ ಮರ:ಶೌರ್ಯ ಘಟಕದ ಸ್ವಯಂ ಸೇವಕರಿಂದ ತೆರವುಗೊಳಿಸುವ ಕಾರ್ಯ

Suddi Udaya

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya

ಪದ್ಮುಂಜ: ಆಟೋ ರಿಕ್ಷಾ ಪಲ್ಟಿ, ಗಂಭೀರ ಗಾಯಗೊಂಡ ಚಾಲಕ ಮೃತ್ಯು

Suddi Udaya

ಧರ್ಮಸ್ಥಳ: ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಇದರ 25ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ 9ನೇ ಸಹಾಯಧನ ಹಸ್ತಾಂತರ

Suddi Udaya
error: Content is protected !!