25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ : ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

ಮಚ್ಚಿನ: ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ಆಶ್ರಯದಲ್ಲಿ 31 ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಆ.16 ರಂದು ಸಾರ್ವಜನಿಕ ಕ್ರೀಡಾಂಗಣ ಬಳ್ಳಮಂಜದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಅನಂತ ಕೃಷ್ಣ ಭಟ್ ಕುಕ್ಕಿಲ ದೀಪ ಬೆಳಗಿಸಿ ಉದ್ಘಾಟಿಸಿದರು. ಸಭಾಧ್ಯಕ್ಷರಾಗಿ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ನಾರಾಯಣ ಪೂಜಾರಿ ವಹಿಸಿದರು.

ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿ, ಮೆಡಿಸಿಟಿ ಕ್ಲಿನಿಕ್ ವೈದ್ಯರಾದ ತೇಜಸ್ವಿ ಬಳ್ಳಮಂಜ, ಆಪ್ಯo ಕ್ಲಿನಿಕ್ ವೈದ್ಯರಾದ ಹೇಮಚಂದ್ರ ಶೆಟ್ಟಿ, ಸುಧೀರ್ ಶೆಟ್ಟಿ ಕೋರಬೆಟ್ಟು ಉಪಸ್ಥಿತರಿದ್ದರು. ನವೀನ್ ಸ್ವಾಗತಿಸಿ, ನಿಶಾಂತ್ ಧನ್ಯವಾದ ಕೋರಿದರು.

ನಂತರ ಮಕ್ಕಳಿಗೆ ಪುರುಷರಿಗೆ ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ಸುಮಾರು 40 ಮುದ್ದು ಮಕ್ಕಳಿಂದ ಕೃಷ್ಣ ವೇಷ ಸ್ಪರ್ಧೆ ನಡೆಯಿತು ಮತ್ತು ಬೈಕ್ ರೇಸ್, ಹಗ್ಗ ಜಗ್ಗಾಟ , ಗೋವಿಂದ ಸ್ಪರ್ಧೆ ಬಳ್ಳಮಂಜ ಪೇಟೆಯಿಂದ ಕ್ರೀಡಾಂಗಣದವರೆಗೆ, ಅಟ್ಟಿ ಗೋವಿಂದ ಶ್ರೀ ಕೃಷ್ಣ ಲೀಲೋತ್ಸವ ನೀರ ಓಕುಳಿ ಆಟದೊಂದಿಗೆ ಭವ್ಯ ಮೆರವಣಿಗೆ ನಡೆಯಿತು.

ಸಂಜೆ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾದ. ಕೆ. ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಉದ್ಯಮಿಗಳಾದ ಕಿರಣ್ ಚಂದ್ರ ಪುಷ್ಪಗಿರಿ, ಮಹಾವೀರ ಕಾಲೇಜ್ ಮೂಡಬಿದ್ರೆಯ ಪ್ರಾಂಶುಪಾಲರಾದ ರಾಧಾಕೃಷ್ಣ ಶೆಟ್ಟಿ, ಬಸವನಗುಡಿ ಕ್ಷೇತ್ರದ ಆಡಳಿತ ಮೊಕ್ತೇಶ್ವರರಾದ ಪ್ರಶಾಂತ್ , ಕುತ್ಕೊಳಿ ಗರೋಡಿ ಕ್ಷೇತ್ರದ ಅಧ್ಯಕ್ಷ ಸುನಿಲ್ ಕುಮಾರ್ ಅಗರಿ, ದ.ಕ ಜಿಲ್ಲಾ ಅಸಂಘಟಿತ ಕಾರ್ಮಿಕರ ಘಟಕ ಅಧ್ಯಕ್ಷ ಅಬ್ಬಸ್ ಆಲಿ, ರೋಟರಿ ಕ್ಲಬ್ ಕಾರ್ಯದರ್ಶಿ ಜಿ. ವಾಸುದೇವ ಗೌಡ ಮಡಂತ್ಯಾರ್ ಜೆಸಿಐ ಮಡಂತ್ಯಾರ್ ಇದರ ಅಧ್ಯಕ್ಷ ಅಮಿತಾ ಅಶೋಕ್ ಗುಂಡಿಪಲ್ಕೆ, ಮಡಂತ್ಯಾರು ಬಿಲ್ಲವ ಸಂಘದ ಅಧ್ಯಕ್ಷ ವೆಂಕಪ್ಪ ಪೂಜಾರಿ, ಮಂಗಳೂರು ಉದ್ಯಮಿಗಳಾದ ಅನೀಶ್ ಕರ್ಕೆರ, ಬಂಗೇರಕಟ್ಟೆ ಉದ್ಯಮಿಗಳಾದ ಪಿ. ಕೆ ಇಸ್ಮಾಯಿಲ್ ಉಪಸ್ಥಿತರಿದ್ದರು .

ಬಳ್ಳಮಂಜದ ಮಹಿಳಾ ಯುವ ಉದ್ಯಮಿಗಳಾದ ಕುಮಾರಿ ಶ್ರೇಯಾ ಶೆಟ್ಟಿ, ಮಚ್ಚಿನ ಪ್ರೌಢಶಾಲಾ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ. ಅಮೃತ ಕೆ. ಸಾಕೆತ್ ಬಿ. ದಿಶಾಂತ್ ಇವರನ್ನು ಸನ್ಮಾನಿಸಲಾಯಿತು. ವಿವಿಧ ಕ್ರೀಡೆಗಳ ಬಹುಮಾನ ವಿತರಿಸಲಾಯಿತು. ಲಾನ್ಸಿ ಸ್ವಾಗತಿಸಿ, ಸದಾಶಿವ ಹೆಗ್ಡೆ ವಂದಿಸಿದರು.

✍️ವರದಿ ಹರ್ಷ ಬಳ್ಳಮಂಜ

Related posts

ವೇಣೂರು: ಸುದೇರ್ದು ನಿವಾಸಿ ಸುರೇಶ ಮೂಲ್ಯ ನಿಧನ

Suddi Udaya

ಸುಲ್ಕೇರಿ ಗ್ರಾಮಸಭೆ: ಮಳೆ ಪ್ರಾರಂಭಕ್ಕಿಂತ ಮುಂಚೆ ನಾವರ ರಸ್ತೆ ಕಾಮಗಾರಿ ಪ್ರಾರಂಭಿಸಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Suddi Udaya

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya
error: Content is protected !!