23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲದಲ್ಲಿ 28ನೇ ವರ್ಷದ ಮೊಸರು ಕುಡಿಕೆ ಉತ್ಸವ, ಪ್ರತಿಭಾ ಪುರಸ್ಕಾರ

ಶಿಶಿಲ: ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ವೈಕುಂಠಪುರ ಶಿಶಿಲ ಇವರ ಆಶ್ರಯದಲ್ಲಿ 28ನೇ ವರ್ಷದ ಮೊಸರು ಕುಡಿಕೆ ಉತ್ಸವ ಜರುಗಿತು.


ಬೆಳಿಗ್ಗೆ ವಾಲ್ಮೀಕಿ ಆಶ್ರಮ ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಉಮೇಶ್ ಕುಕ್ಕೆಶ್ರೀ ಕಾರ್ಯಕ್ರಮ ಉದ್ಘಾಟಿಸಿದರು.
ಬಳಿಕ ಪುರುಷರಿಗೆ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆದವು.


ಮಕ್ಕಳಿಗೆ ಶ್ರೀ ಕೃಷ್ಣ ವೇಷ ಸ್ಪರ್ಧೆ ಆಯೋಜಿಸಲಾಗಿತ್ತು. ವಾಲ್ಮೀಕಿ ಆಶ್ರಮ ಶಾಲೆ ,ಹೇವಾಜೆ ಕಿ.ಪ್ರಾ.ಶಾಲೆ ಹಿ.ಪ್ರಾ.ಶಾಲೆ ಶಿಶಿಲ ಹಾಗೂ ಅಂಗನವಾಡಿ ಪುಟಾಣಿಗಳಿಂದ ನೃತ್ಯ ಕಾರ್ಯಕ್ರಮ ನಡೆಯಿತು. ಮಂಗಳೂರಿನ ಭರತನಾಟ್ಯ ಕಲಾವಿದೆ ಕು|| ವಿಧಾತ್ರಿ ಕೋಣೆಮನೆ ಇವರಿಂದ ಭರತನಾಟ್ಯ ಕಾರ್ಯಕ್ರಮ ನಿತಿನ್ ಬೈರಕಟ್ಟ ಇವರಿಂದ ಉರಗ ಮಾಹಿತಿ ಕಾರ್ಯಕ್ರಮ ನಡೆಯಿತು.

ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಹರೀಶ್ ಕೊಳಂಬೆ ವಹಿಸಿದ್ದರು. ಅರಣ್ಯ ಮಿತ್ರ ಪ್ರಶಸ್ತಿ ಪುರಸ್ಕೃತ ಸಚಿನ್ ಭಿಡೆ ಮುಂಡಾಜೆ, ಉದ್ಯಮಿ ದಯಾನಂದ ಶೆಟ್ಟಿ ಹಾಗೂ ನಾಟಿವೈದ್ಯೆ ಮುತ್ತಮ್ ಇವರಿಗೆ ಹಾಗೂ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಮಾಡಲಾಯಿತು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಶಿಶಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಿನ್ ಡಿ., ಕೊಕ್ಕಡ ಗ್ರಾಮ ಆಡಳಿತಾಧಿಕಾರಿ ಶ್ರೀಮತಿ ತೇಜಸ್ವಿ ಹಾಗೂ ಉಮೇಶ್ ಕುಕ್ಕೆಶ್ರೀ ಉಪಸ್ಥಿತರಿದ್ದರು. ನಿತಿನ್ ಬೈರಕಟ್ಟ ಸ್ವಾಗತಿಸಿದರು. ಸುಂದರ ಕೆ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಂಜಿತ್ ಹಾಗೂ ಶರತ್ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಶರತ್, ಭರತ್ ವಂದಿಸಿದರು. ಸತೀಶ್ ಬೆದ್ರ ಕಾರ್ಯಕ್ರಮ ನಿರೂಪಿಸಿದರು. ಯುವಕ ಮಂಡಲದ ಸದಸ್ಯರು ಸಹಕರಿಸಿದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Suddi Udaya

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕಾಲ್ತುಳಿತ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ: ಹರೀಶ್ ಪೂಂಜ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಮೇಲಂತಬೆಟ್ಟು ಮೂಡಲ ಹಾಗೂ ಕೋಟಿ ಕಟ್ಟೆ ಕೊಡಿಯೇಲ್ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ ಪೂರ್ಣ

Suddi Udaya
error: Content is protected !!