23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

ಉಜಿರೆ : “ಸಮ್ಯಕ್ ಭಾಷಾ ಸಂಸ್ಕೃತ ಭಾಷಾ, ಎಲ್ಲಾ ಭಾಷೆಗಳೂ ಸಂಸ್ಕೃತಮಯವಾಗಿದೆ. ಸಂಸ್ಕೃತ ಇರದ ಕ್ಷೇತ್ರವಿಲ್ಲ” ಎಂದು ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕರಾದ ಡಾ. ಪ್ರಸನ್ನ ಕುಮಾರ್ ಐತಾಳ್ ಇವರು ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ‘ಆತ್ಮಾನಂ ಸಂಸ್ಕೃತಂ ಮನ್ಯೆ’ ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿದ್ದ ‘ಸಂಸ್ಕೃತೋತ್ಸವ’ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಸಂಸ್ಕೃತ ಜಯ ಘೋಷಣೆಗಳೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಸಮೂಹ ಗಾಯನ ಹಾಗೂ ವಿಶ್ವ ಸಂಸ್ಕೃತ ದಿನದ ಮಹತ್ವದ ಕುರಿತು ಭಾಷಣ ಆಯೋಜಿಸಲಾಗಿತ್ತು.

ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿನಿಯರಾದ ಶಶಾಂಕ್ ಮತ್ತು ಸಹನ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಸುಜನಾ ವಾಲ್ತಾಜೆ ಸ್ವಾಗತಿಸಿ, ವಿದ್ಯಾರ್ಥಿ ಕ್ರಿಸ್ಟಿ ವಂದಿಸಿದರು.

Related posts

ಬಳಂಜ ಗ್ರಾ.ಪಂ. ನಲ್ಲಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ರವರು ಭೇಟಿ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚಿದಾನಂದ ಇಡ್ಯ, ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ ಆಯ್ಕೆ

Suddi Udaya
error: Content is protected !!