25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು: ಉಷಾ ಎನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಉಷಾ ಏನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ ಆ. 19 ರಂದು ಜರಗಿತು.

ಕಾರ್ಯಕ್ರಮವನ್ನು ಊರ ಪ್ರಮುಖರಾದ ಗಿರೀಶ್ ಬಾರಿತ್ತಾಯ ಪಾರಳ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ ಫಲಾನುಭವಿ ವಿದ್ಯಾರ್ಥಿಗಳಿಗೆ ನಿಧಿಯನ್ನು ಸಾಂಕೇತಿಕವಾಗಿ ವಿತರಿಸಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಶಿಕ್ಷಣ ಸಂಯೋಜಕರಾದ ಎಸ್. ಎನ್ ಕಾಕತ್ಕರ್ ಮಾತನಾಡಿ ಗ್ರಾಮೀಣ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ನೀಡಿದ ಈ ದತ್ತಿ ನಿಧಿ ಇತರರಿಗೂ ಪ್ರೇರಕ ಎಂದು ತಿಳಿಸಿದರು. ದತ್ತಿ ನಿಧಿಯಿಂದ ವಿದ್ಯಾರ್ಥಿಗಳ ಬಸ್ ಪಾಸ್ ಶುಲ್ಕ ಮತ್ತು ಶೈಕ್ಷಣಿಕ ಶುಲ್ಕವನ್ನು ನೀಡಲಾಯಿತು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಬೆಳಾಲು ಇದರ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ರಾಜೇಶ್ ಕುರ್ಕಿಲ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶಶಿಧರ , ಶಿಕ್ಷಕ ವೃಂದದವರು ಉಪಸ್ಥಿತರಿದ್ದರು ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಸ್ವಾಗತಿಸಿದರು. ಶಿಕ್ಷಕರಾದ ಕಿರಣ್ ವಂದಿಸಿದರು. ಸುಮನ್ ಯು. ಎಸ್ ಕಾರ್ಯಕ್ರಮ ನಿರೂಪಿಸಿದರು

Related posts

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!