ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಸ. ಪ.ಪೂ. ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ವೇಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ .ಟ್ರಸ್ಟ್ ಗುರುವಾಯನಕೆರೆ, ಅಖಿಲ ಭಾರತ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ರೋಟರಿ ಕ್ಲಬ್ ಫಲ್ಗುಣಿ ಸಿದ್ದಕಟ್ಟೆ, ಲಯನ್ಸ್ ಕ್ಲಬ್ ವೇಣೂರು ಮತ್ತು ಎನ್.ಎಸ್.ಎಸ್ ಘಟಕ ಇದರ ಸಹಯೋಗದಲ್ಲಿ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಅಧ್ಯಕ್ಷತೆಯನ್ನು ಶಾಲಾ ಉಪಪ್ರಾಂಶುಪಾಲ ವೆಂಕಟೇಶ್ ಎಸ್. ತುಳುಪುಲೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ದುಶ್ಚಟಗಳ ದುರಭ್ಯಾಸಗಳ ಮುಂದಿನ ವಿದ್ಯಾರ್ಥಿ ಜೀವನದಲ್ಲಿ ಬರುವ ಎಡವು ತೊಡಕುಗಳ ಬಗ್ಗೆ ಮನಮುಟ್ಟುವಂತೆ ಅರಿವು ಮೂಡಿಸಿದರು.

ಸಮಾರಂಭದ ಉದ್ಘಾಟನೆಯನ್ನು ಶಾಲಾ ಎಸ್. ಡಿ. ಎಂ. ಸಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಜನ ಜಾಗೃತಿ ವೇದಿಕೆಯ ವಲಯ ಅಧ್ಯಕ್ಷ ಮೋಹನ್ ಅಂಡಿಂಜೆ ಪ್ರಾಸ್ತವಿಕವಾಗಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ವಲಯ ಅಧ್ಯಕ್ಷ ಗಿರೀಶ್ ಕೆ. ಎಸ್. ವೇಣೂರು ಒಕ್ಕೂಟದ ಅಧ್ಯಕ್ಷ ಸುಚಿತ್ರ ಹೆಗ್ಡೆ, ಲಯನ್ಸ್ ಕ್ಲಬ್ ನಿಕಟ ಪೂರ್ವ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಸಿದ್ದಕಟ್ಟೆ ರೋಟರಿ ಕ್ಲಬ್ ಕಾರ್ಯದರ್ಶಿ ಟೀನಾ ಡಿಕೊ, ಯೋಜನೆಯ ವಲಯದ ಮೇಲ್ವಿಚಾರಕಿ ಶಾಲಿನಿ, ಸೇವಾಪ್ರತಿನಿಧಿ ಜಯಂತಿ ವೇಣೂರು ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಲೆವಿನಶ್ರೀ ನಿರೂಪಿಸಿ, ರವೀಂದ್ರ ಸ್ವಾಗತಿಸಿ, ಮೇಲ್ವಿಚಾರಕಿ ಶಾಲಿನಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಪ್ರತಿಷ್ಠಿತ ಬಿಲ್ಲವ ಗುತ್ತು ಮನೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರೆಖ್ಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಾದ ತೇಜಸ್ ಮತ್ತು ಸಾತ್ವಿಕ್ ಯಂ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ತೆಂಕಕಾರಂದೂರು: ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya
error: Content is protected !!